ಬ್ರೇಕಿಂಗ್ ನ್ಯೂಸ್
09-04-21 06:13 pm Source: MYKHEL ಕ್ರೀಡೆ
ಭಾರತ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಮೊದಲ ಪಂದ್ಯದಲ್ಲಿನ ಕುತೂಹಲಕಾರಿ ಕಾದಾಟವೊಂದನ್ನು ನೋಡಲು ಕಾದು ಕುಳಿದಿದ್ದಾರಂತೆ. ಹೀಗಂತ ಸ್ವತಃ ಆಕಾಶ್ ಚೋಪ್ರ ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಹೇಳಿಕೊಂಡಿದ್ದಾರೆ.
ಟೀಮ್ ಇಂಡಿಯಾದ ಭಾಗವಾಗಿರುವ ಈ ಜೋಡಿ ಮೈದಾನದಲ್ಲಿ ಮುಖಾಮುಖಿಯಾವುದು ನೋಡಲು ಉತ್ಸುಕನಾಗಿದ್ದೇನೆ ಎಂದು ಹೇಳಿದ್ದಾರೆ. ಆಕಾಶ್ ಚೋಪ್ರ ಹೀಗೆ ಹೇಳಿದ ಆ ಆಟಗಾರರು ವಿರಾಟ್ ಕೊಹ್ಲಿ ಹಾಗೂ ಜಸ್ಪ್ರೀತ್ ಬೂಮ್ರಾ. ಈ ಇಬ್ಬರ ನಡುವಿನ ಸೆಣೆಸಾಟ ಐಪಿಎಲ್ 2021ಯ ಮೊದಲ ಪಂದ್ಯದ ಅತ್ಯಂತ ಕುತೂಹಲಕಾರಿ ಕದನವಾಗಿದೆ ಎಂದು ಆಕಾಶ್ ಚೋಪ್ರ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಜಸ್ಪ್ರೀತ್ ಬೂಮ್ರಾ ಹಾಗೂ ವಿರಾಟ್ ಕೊಹ್ಲಿ ನಡುವಿನ ಸ್ಪರ್ಧೆಯನ್ನು ಬೆಸ್ಟ್ vs ಬೆಸ್ಟ್ ಮುಖಾಮುಖಿ ಎಂದು ಚೋಪ್ರ ಕರೆದಿದ್ದಾರೆ. ವಿರಾಟ್ ಕೊಹ್ಲಿ ಉತ್ತಮ ಫಾರ್ಮ್ನೊಂದಿಗೆ ಐಪಿಎಲ್ಗೆ ಬಂದಿಳಿದಿದ್ದರೆ ಜಸ್ಪ್ರೀತ್ ಬೂಮ್ರಾ ವಿವಾಹವಾಗಿ ವಿರಾಮ ಪಡೆದು ಐಪಿಎಲ್ನಲ್ಲಿ ಕಣಕ್ಕಿಳಿಯುತ್ತಿದ್ದಾರೆ.
"ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ, ಮತ್ತೊಂದೆಡೆ ಬೂಮ್ರಾ ಹೊಸ ಚೆಂಡಿನ ಮೂಲಕ ದಾಳಿಗಿಳಿಯಲಿದ್ದಾರೆ. ಇದು ಕುತೂಹಲಕಾರಿ ಕಾದಾಟ ಯಾಕೆಂದರೆ ಜಸ್ಪ್ರೀತ್ ಬೂಮ್ರಾ ವಿರಾಟ್ ಕೊಹ್ಲಿಯನ್ನು ಹಲವು ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ" ಎಂದು ಚೋಪ್ರ ಹೇಳಿದ್ದಾರೆ.
ಕುತೂಹಲಕಾರಿ ಸಂಗತಿಯೆಂದರೆ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ವಿರುದ್ಧ ವೇಗಿ ಜಸ್ಪ್ರೀತ್ ಬೂಮ್ರಾ ಉತ್ತಮ ದಾಖಲೆ ಹೊಂದಿದ್ದಾರೆ. 2013ರ ಐಪಿಎಲ್ನಲ್ಲಿ ಪದಾರ್ಪಣಾ ಪಂದ್ಯದಲ್ಲಿ ವಿರಾಟ್ ಕೊಹ್ಲಿಯನ್ನು ಮೊದಲ ಬಲಿಯಾಗಿ ಪಡೆದಿದ್ದರು ಬೂಮ್ರಾ. ಬಳಿಕ ಕಳೆದ 2020ರಲ್ಲಿ ಐಪಿಎಲ್ನ 100ನೇ ವಿಕೆಟ್ ಆಗಿ ಕೊಹ್ಲಿ ಬೂಮ್ರಾಗೆ ವಿಕೆಟ್ ಒಪ್ಪಿಸಿದ್ದಾರೆ.
This News Article Is A Copy Of MYKHEL
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm