ಬ್ರೇಕಿಂಗ್ ನ್ಯೂಸ್
09-04-21 06:13 pm Source: MYKHEL ಕ್ರೀಡೆ
ಭಾರತ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಮೊದಲ ಪಂದ್ಯದಲ್ಲಿನ ಕುತೂಹಲಕಾರಿ ಕಾದಾಟವೊಂದನ್ನು ನೋಡಲು ಕಾದು ಕುಳಿದಿದ್ದಾರಂತೆ. ಹೀಗಂತ ಸ್ವತಃ ಆಕಾಶ್ ಚೋಪ್ರ ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಹೇಳಿಕೊಂಡಿದ್ದಾರೆ.
ಟೀಮ್ ಇಂಡಿಯಾದ ಭಾಗವಾಗಿರುವ ಈ ಜೋಡಿ ಮೈದಾನದಲ್ಲಿ ಮುಖಾಮುಖಿಯಾವುದು ನೋಡಲು ಉತ್ಸುಕನಾಗಿದ್ದೇನೆ ಎಂದು ಹೇಳಿದ್ದಾರೆ. ಆಕಾಶ್ ಚೋಪ್ರ ಹೀಗೆ ಹೇಳಿದ ಆ ಆಟಗಾರರು ವಿರಾಟ್ ಕೊಹ್ಲಿ ಹಾಗೂ ಜಸ್ಪ್ರೀತ್ ಬೂಮ್ರಾ. ಈ ಇಬ್ಬರ ನಡುವಿನ ಸೆಣೆಸಾಟ ಐಪಿಎಲ್ 2021ಯ ಮೊದಲ ಪಂದ್ಯದ ಅತ್ಯಂತ ಕುತೂಹಲಕಾರಿ ಕದನವಾಗಿದೆ ಎಂದು ಆಕಾಶ್ ಚೋಪ್ರ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಜಸ್ಪ್ರೀತ್ ಬೂಮ್ರಾ ಹಾಗೂ ವಿರಾಟ್ ಕೊಹ್ಲಿ ನಡುವಿನ ಸ್ಪರ್ಧೆಯನ್ನು ಬೆಸ್ಟ್ vs ಬೆಸ್ಟ್ ಮುಖಾಮುಖಿ ಎಂದು ಚೋಪ್ರ ಕರೆದಿದ್ದಾರೆ. ವಿರಾಟ್ ಕೊಹ್ಲಿ ಉತ್ತಮ ಫಾರ್ಮ್ನೊಂದಿಗೆ ಐಪಿಎಲ್ಗೆ ಬಂದಿಳಿದಿದ್ದರೆ ಜಸ್ಪ್ರೀತ್ ಬೂಮ್ರಾ ವಿವಾಹವಾಗಿ ವಿರಾಮ ಪಡೆದು ಐಪಿಎಲ್ನಲ್ಲಿ ಕಣಕ್ಕಿಳಿಯುತ್ತಿದ್ದಾರೆ.
"ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ, ಮತ್ತೊಂದೆಡೆ ಬೂಮ್ರಾ ಹೊಸ ಚೆಂಡಿನ ಮೂಲಕ ದಾಳಿಗಿಳಿಯಲಿದ್ದಾರೆ. ಇದು ಕುತೂಹಲಕಾರಿ ಕಾದಾಟ ಯಾಕೆಂದರೆ ಜಸ್ಪ್ರೀತ್ ಬೂಮ್ರಾ ವಿರಾಟ್ ಕೊಹ್ಲಿಯನ್ನು ಹಲವು ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ" ಎಂದು ಚೋಪ್ರ ಹೇಳಿದ್ದಾರೆ.
ಕುತೂಹಲಕಾರಿ ಸಂಗತಿಯೆಂದರೆ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ವಿರುದ್ಧ ವೇಗಿ ಜಸ್ಪ್ರೀತ್ ಬೂಮ್ರಾ ಉತ್ತಮ ದಾಖಲೆ ಹೊಂದಿದ್ದಾರೆ. 2013ರ ಐಪಿಎಲ್ನಲ್ಲಿ ಪದಾರ್ಪಣಾ ಪಂದ್ಯದಲ್ಲಿ ವಿರಾಟ್ ಕೊಹ್ಲಿಯನ್ನು ಮೊದಲ ಬಲಿಯಾಗಿ ಪಡೆದಿದ್ದರು ಬೂಮ್ರಾ. ಬಳಿಕ ಕಳೆದ 2020ರಲ್ಲಿ ಐಪಿಎಲ್ನ 100ನೇ ವಿಕೆಟ್ ಆಗಿ ಕೊಹ್ಲಿ ಬೂಮ್ರಾಗೆ ವಿಕೆಟ್ ಒಪ್ಪಿಸಿದ್ದಾರೆ.
This News Article Is A Copy Of MYKHEL
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 12:12 pm
Udupi Correspondent
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
15-10-25 12:00 pm
HK News Desk
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm