ಬ್ರೇಕಿಂಗ್ ನ್ಯೂಸ್
12-04-21 06:54 pm Source: MYKHEL ಕ್ರೀಡೆ
ಚೆನ್ನೈ: ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾನುವಾರ (ಏಪ್ರಿಲ್ 11) ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 3ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಕಾದಾಡಿದ್ದವು. ರೋಚಕ ಹಂತಕ್ಕೆ ತಲುಪಿದ್ದ ಈ ಪಂದ್ಯದಲ್ಲಿ ಇಯಾನ್ ಮಾರ್ಗನ್ ನಾಯಕತ್ವದ ಕೆಕೆಆರ್ 10 ರನ್ಗಳ ಜಯ ದಾಖಲಿಸಿತ್ತು. ನಿತೀಶ್ ರಾಣಾ ಅವರ ಸ್ಫೋಟಕ ಅರ್ಧ ಶತಕದಿಂದಾಗಿ ಕೆಕೆಆರ್ ಟೂರ್ನಿಯಲ್ಲಿ ಶುಭಾರಂಭ ಕಾಣಲು ಸಾಧ್ಯವಾಗಿತ್ತು.
ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆರಂಭಿಕರಾಗಿ ಬಂದಿದ್ದ ಎಡಗೈ ಬ್ಯಾಟ್ಸ್ಮನ್ ನಿತೀಶ್ ರಾಣಾ 56 ಎಸೆತಗಳಲ್ಲಿ 80 ರನ್ ಬಾರಿಸಿದ್ದರು. ಆದರೆ ಇನ್ನಿಂಗ್ಸ್ ಮುಗಿಸಿ ಪೆವಿಲಿಯನ್ನತ್ತ ನಡೆಯುವಾಗ ರಾಣಾ ಮೂರು ಕೈಬೆರಳುಗಳನ್ನು ತೋರಿಸಿ ಏನೋ ಸನ್ನೆ ಮಾಡಿದ್ದರು.
ರಾಣಾ ಕೈಬೆರಳು ತೋರಿಸಿದ್ಯಾಕೆ?
ಬ್ಯಾಟಿಂಗ್ ಮುಗಿಸಿ ನಿರ್ಗಮಿಸುವಾಗ ನಿತೀಶ್ ರಾಣಾ ಅವರು ಕೈ ಬೆರಳು ತೋರಿಸಿ ಸನ್ನೆ ಮಾಡಿದ್ದು ಎಲ್ಲರ ಗಮನ ಸೆಳೆದಿತ್ತು. ಇದಕ್ಕೆ ಕಾರಣ ಅನ್ನೋದನ್ನು ರಾಣಾ ಹೇಳಿದ್ದಾರೆ. ತಂಡದ ಸಹ ಆಟಗಾರ ಹರ್ಭಜನ್ ಸಿಂಗ್ ಜೊತೆ ಮಾತನಾಡಿದ ರಾಣಾ, 'ನನ್ನೆಲ್ಲಾ ಸ್ನೇಹಿತರಿಗೆ ಪಂಜಾಬ್ ಭಾಷೆಯ 'ಬ್ರೌನ್ ಮುಂಡೆ' ಸಾಂಗ್ ಇಷ್ಟ. ಅದಕ್ಕಾಗಿ ನಾನು ಈ ಸನ್ನೆ ಮಾಡಿದೆ. ನಾನು ಯಾವಾಗೆಲ್ಲ ಈ ಸನ್ನೆ ಮಾಡುತ್ತೇನೋ ಅದರರ್ಥ ನಾವೆಲ್ಲ 'ಬ್ರೌನ್ ಮುಂಡೆ' ಎಂದು,' ಎಂದಿದ್ದಾರೆ.
ಯಾರ ಸಾಂಗ್ ಇದು?
ಪಂಜಾಬಿ ಗೀತೆರಚನೆಕಾರ, ಗೀತೆ ನಿರ್ಮಾಪಕ ಎಪಿ ಧಿಲ್ಲನ್ ಎಂದು ಕರೆಯಲ್ಪಡುವ ಅಮೃತ್ಪಾಲ್ ಸಿಂಗ್ ಧಿಲ್ಲನ್ ಅವರ 'ಬ್ರೌನ್ ಮುಂಡೆ' ಸಾಂಗ್ ಹೆಚ್ಚು ಜನಪ್ರಿಯತೆ ಗಿಟ್ಟಿಸಿತ್ತು. 2020ರ ಸೆಪ್ಟೆಂಬರ್ನಲ್ಲಿ ಬಿಡುಗಡೆಯಾಗಿದ್ದ ಈ ಗೀತೆ ಯೂಟ್ಯೂಬ್ನಲ್ಲಿ 164,520,508 ಸಾರಿ ವೀಕ್ಷಿಸಲ್ಪಟ್ಟಿದೆ. ಈ ಗೀತೆಯ ವಿಡಿಯೋದಲ್ಲಿ ನಟರು ಕುಣಿಯುವಾಗ ಮೂರು ಬೆರಳು ತೋರಿಸಿ ಕೈ ಸನ್ನೆ ಮಾಡುತ್ತಾರೆ. ಇದೇ ರೀತಿ ರಾಣಾ ಕೂಡ ಕೈಸನ್ನೆ ಮಾಡಿದ್ದರು.

ಕೆಕೆಆರ್ vs ಎಸ್ಆರ್ಎಚ್ ಪಂದ್ಯದ ಸ್ಕೋರ್
* ಟಾಸ್ ಗೆದ್ದು ಬ್ಯಾಟಿಂಗ್ಗೆ ಇಳಿಸಲ್ಪಟ್ಟಿದ್ದ ಕೋಲ್ಕತ್ತಾ ನೈಟ್ ರೈಡರ್ಸ್, ರಾಣಾ 80 (56), ರಾಹುಲ್ ತ್ರಿಪಾಠಿ 53 (29) ರನ್ನೊಂದಿಗೆ 20 ಓವರ್ಗಳಲ್ಲಿ 6 ವಿಕೆಟ್ ಕಳೆದು 187 ರನ್ ಬಾರಿಸಿತ್ತು.
* ಗುರಿ ಬೆನ್ನಟ್ಟಿದ ಸನ್ ರೈಸರ್ಸ್ ಹೈದರಾಬಾದ್, ಮನೀಶ್ ಪಾಂಡೆ ಅಜೇಯ 61 (44), ಜಾನಿ ಬೇರ್ಸ್ಟೋವ್ 55 (40) ರನ್ನೊಂದಿಗೆ 20 ಓವರ್ಗೆ 5 ವಿಕೆಟ್ ನಷ್ಟದಲ್ಲಿ 177 ರನ್ ಬಾರಿಸಿ ಶರಣಾಯ್ತು.
* ಹೈದರಾಬಾದ್ನ ಮೊಹಮ್ಮದ್ ನಬಿ, ರಶೀದ್ ಖಾನ್, ಕೋಲ್ಕತ್ತಾದ ಪ್ರಸಿದ್ಧ್ ಕೃಷ್ಣ 2 ವಿಕೆಟ್ನೊಂದಿಗೆ ಗಮನ ಸೆಳೆದರು. ನಿತೀಶ್ ರಾಣಾ ಪಂದ್ಯಶ್ರೇಷ್ಠರೆನಿಸಿದರು.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm