ಬ್ರೇಕಿಂಗ್ ನ್ಯೂಸ್
16-04-21 06:45 pm Source: MYKHEL ಕ್ರೀಡೆ
ಯುಎಇಯಲ್ಲಿ ನಡೆದ ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳಪೆ ಪ್ರದರ್ಶನವನ್ನು ನೀಡಿ ಅಂಕಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಹೀಗಾಗಿ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಯಶಸ್ಸಿನ ಹಾದಿಗೆ ಮರಳಲು ಚೆನ್ನೈ ಸೂಪರ್ ಕಿಂಗ್ಸ್ ತಂಡ ಟೂರ್ನಿ ಆರಂಭಕ್ಕೂ ಮುನ್ನ ಕಠಿಣಾಭ್ಯಾಸವನ್ನು ನಡೆಸಿತ್ತು.
ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ ಎಸ್ ಧೋನಿ ಪಾಲಿಗೆ ಐಪಿಎಲ್ 2021 ಸಕಾರಾತ್ಮಕವಾದ ಆರಂಭವನ್ನು ನೀಡಿಲ್ಲ. ಏಪ್ರಿಲ್ 10ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೋಲುಂಡಿತ್ತು.
ಈ ಪಂದ್ಯದ ಸೋಲಿನ ಜೊತೆಗೆ ಎಂ ಎಸ್ ಧೋನಿಗೆ ಚೆನ್ನೈ ತಂಡ ನಿಧಾನಗತಿಯ ಬೌಲಿಂಗ್ ಮಾಡಿದ ಕಾರಣಕ್ಕೆ 12 ಲಕ್ಷ ದಂಡವನ್ನು ಸಹ ವಿಧಿಸಲಾಗಿತ್ತು. ಐಪಿಎಲ್ 2021ರ ನೀತಿ ಸಂಹಿತೆಯ ಪ್ರಕಾರ ತಂಡವೊಂದು 20 ಓವರ್ಗಳನ್ನು 90 ನಿಮಿಷಗಳಲ್ಲಿ ಮುಗಿಸಬೇಕು, ಇಲ್ಲದಿದ್ದರೆ ಆ ತಂಡದ ನಾಯಕನಿಗೆ 12 ಲಕ್ಷ ದಂಡ ವಿಧಿಸಲಾಗುತ್ತದೆ. ಎಂಎಸ್ ಧೋನಿ ಅವರಿಗೂ ಸಹ ಇದೇ ಮಾದರಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಿಧಾನಗತಿಯ ಬೌಲಿಂಗ್ ಮಾಡಿಸಿದ್ದಕ್ಕೆ ದಂಡ ಹಾಕಲಾಗಿತ್ತು.
ಒಂದು ವೇಳೆ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಎರಡನೇ ಬಾರಿ ನಿಧಾನಗತಿಯ ಬೌಲಿಂಗ್ ಮಾಡಿದರೆ 24 ಲಕ್ಷ ದಂಡ ವಿಧಿಸಲಾಗುವುದು.
ಹಾಗೂ ಮೂರನೇ ಬಾರಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಧಾನಗತಿಯ ಬೌಲಿಂಗ್ ಮಾಡಿದ್ದೇ ಆದಲ್ಲಿ ನಾಯಕ ಎಂಎಸ್ ಧೋನಿಗೆ 30 ಲಕ್ಷ ದಂಡದ ಜೊತೆಗೆ ಒಂದು ಪಂದ್ಯದ ನಿಷೇಧವನ್ನು ನಿಯಮದ ಪ್ರಕಾರ ಹೇರಲಾಗುತ್ತದೆ ಹಾಗೂ ತಂಡಕ್ಕೂ ಕೂಡ 12 ಲಕ್ಷ ದಂಡ ವಿಧಿಸಲಾಗುತ್ತದೆ.
This News Article Is A Copy Of MYKHEL
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm