ಬ್ರೇಕಿಂಗ್ ನ್ಯೂಸ್
16-04-21 06:45 pm Source: MYKHEL ಕ್ರೀಡೆ
ಯುಎಇಯಲ್ಲಿ ನಡೆದ ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳಪೆ ಪ್ರದರ್ಶನವನ್ನು ನೀಡಿ ಅಂಕಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಹೀಗಾಗಿ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಯಶಸ್ಸಿನ ಹಾದಿಗೆ ಮರಳಲು ಚೆನ್ನೈ ಸೂಪರ್ ಕಿಂಗ್ಸ್ ತಂಡ ಟೂರ್ನಿ ಆರಂಭಕ್ಕೂ ಮುನ್ನ ಕಠಿಣಾಭ್ಯಾಸವನ್ನು ನಡೆಸಿತ್ತು.
ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ ಎಸ್ ಧೋನಿ ಪಾಲಿಗೆ ಐಪಿಎಲ್ 2021 ಸಕಾರಾತ್ಮಕವಾದ ಆರಂಭವನ್ನು ನೀಡಿಲ್ಲ. ಏಪ್ರಿಲ್ 10ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೋಲುಂಡಿತ್ತು.
ಈ ಪಂದ್ಯದ ಸೋಲಿನ ಜೊತೆಗೆ ಎಂ ಎಸ್ ಧೋನಿಗೆ ಚೆನ್ನೈ ತಂಡ ನಿಧಾನಗತಿಯ ಬೌಲಿಂಗ್ ಮಾಡಿದ ಕಾರಣಕ್ಕೆ 12 ಲಕ್ಷ ದಂಡವನ್ನು ಸಹ ವಿಧಿಸಲಾಗಿತ್ತು. ಐಪಿಎಲ್ 2021ರ ನೀತಿ ಸಂಹಿತೆಯ ಪ್ರಕಾರ ತಂಡವೊಂದು 20 ಓವರ್ಗಳನ್ನು 90 ನಿಮಿಷಗಳಲ್ಲಿ ಮುಗಿಸಬೇಕು, ಇಲ್ಲದಿದ್ದರೆ ಆ ತಂಡದ ನಾಯಕನಿಗೆ 12 ಲಕ್ಷ ದಂಡ ವಿಧಿಸಲಾಗುತ್ತದೆ. ಎಂಎಸ್ ಧೋನಿ ಅವರಿಗೂ ಸಹ ಇದೇ ಮಾದರಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಿಧಾನಗತಿಯ ಬೌಲಿಂಗ್ ಮಾಡಿಸಿದ್ದಕ್ಕೆ ದಂಡ ಹಾಕಲಾಗಿತ್ತು.
ಒಂದು ವೇಳೆ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಎರಡನೇ ಬಾರಿ ನಿಧಾನಗತಿಯ ಬೌಲಿಂಗ್ ಮಾಡಿದರೆ 24 ಲಕ್ಷ ದಂಡ ವಿಧಿಸಲಾಗುವುದು.
ಹಾಗೂ ಮೂರನೇ ಬಾರಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಧಾನಗತಿಯ ಬೌಲಿಂಗ್ ಮಾಡಿದ್ದೇ ಆದಲ್ಲಿ ನಾಯಕ ಎಂಎಸ್ ಧೋನಿಗೆ 30 ಲಕ್ಷ ದಂಡದ ಜೊತೆಗೆ ಒಂದು ಪಂದ್ಯದ ನಿಷೇಧವನ್ನು ನಿಯಮದ ಪ್ರಕಾರ ಹೇರಲಾಗುತ್ತದೆ ಹಾಗೂ ತಂಡಕ್ಕೂ ಕೂಡ 12 ಲಕ್ಷ ದಂಡ ವಿಧಿಸಲಾಗುತ್ತದೆ.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm