ಬ್ರೇಕಿಂಗ್ ನ್ಯೂಸ್
16-04-21 06:45 pm Source: MYKHEL ಕ್ರೀಡೆ
ಯುಎಇಯಲ್ಲಿ ನಡೆದ ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳಪೆ ಪ್ರದರ್ಶನವನ್ನು ನೀಡಿ ಅಂಕಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಹೀಗಾಗಿ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಯಶಸ್ಸಿನ ಹಾದಿಗೆ ಮರಳಲು ಚೆನ್ನೈ ಸೂಪರ್ ಕಿಂಗ್ಸ್ ತಂಡ ಟೂರ್ನಿ ಆರಂಭಕ್ಕೂ ಮುನ್ನ ಕಠಿಣಾಭ್ಯಾಸವನ್ನು ನಡೆಸಿತ್ತು.
ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ ಎಸ್ ಧೋನಿ ಪಾಲಿಗೆ ಐಪಿಎಲ್ 2021 ಸಕಾರಾತ್ಮಕವಾದ ಆರಂಭವನ್ನು ನೀಡಿಲ್ಲ. ಏಪ್ರಿಲ್ 10ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೋಲುಂಡಿತ್ತು.
ಈ ಪಂದ್ಯದ ಸೋಲಿನ ಜೊತೆಗೆ ಎಂ ಎಸ್ ಧೋನಿಗೆ ಚೆನ್ನೈ ತಂಡ ನಿಧಾನಗತಿಯ ಬೌಲಿಂಗ್ ಮಾಡಿದ ಕಾರಣಕ್ಕೆ 12 ಲಕ್ಷ ದಂಡವನ್ನು ಸಹ ವಿಧಿಸಲಾಗಿತ್ತು. ಐಪಿಎಲ್ 2021ರ ನೀತಿ ಸಂಹಿತೆಯ ಪ್ರಕಾರ ತಂಡವೊಂದು 20 ಓವರ್ಗಳನ್ನು 90 ನಿಮಿಷಗಳಲ್ಲಿ ಮುಗಿಸಬೇಕು, ಇಲ್ಲದಿದ್ದರೆ ಆ ತಂಡದ ನಾಯಕನಿಗೆ 12 ಲಕ್ಷ ದಂಡ ವಿಧಿಸಲಾಗುತ್ತದೆ. ಎಂಎಸ್ ಧೋನಿ ಅವರಿಗೂ ಸಹ ಇದೇ ಮಾದರಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಿಧಾನಗತಿಯ ಬೌಲಿಂಗ್ ಮಾಡಿಸಿದ್ದಕ್ಕೆ ದಂಡ ಹಾಕಲಾಗಿತ್ತು.
ಒಂದು ವೇಳೆ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಎರಡನೇ ಬಾರಿ ನಿಧಾನಗತಿಯ ಬೌಲಿಂಗ್ ಮಾಡಿದರೆ 24 ಲಕ್ಷ ದಂಡ ವಿಧಿಸಲಾಗುವುದು.
ಹಾಗೂ ಮೂರನೇ ಬಾರಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಧಾನಗತಿಯ ಬೌಲಿಂಗ್ ಮಾಡಿದ್ದೇ ಆದಲ್ಲಿ ನಾಯಕ ಎಂಎಸ್ ಧೋನಿಗೆ 30 ಲಕ್ಷ ದಂಡದ ಜೊತೆಗೆ ಒಂದು ಪಂದ್ಯದ ನಿಷೇಧವನ್ನು ನಿಯಮದ ಪ್ರಕಾರ ಹೇರಲಾಗುತ್ತದೆ ಹಾಗೂ ತಂಡಕ್ಕೂ ಕೂಡ 12 ಲಕ್ಷ ದಂಡ ವಿಧಿಸಲಾಗುತ್ತದೆ.
This News Article Is A Copy Of MYKHEL
15-10-25 03:35 pm
Bangalore Correspondent
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 05:36 pm
Mangalore Correspondent
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm