ಬ್ರೇಕಿಂಗ್ ನ್ಯೂಸ್
16-04-21 06:45 pm Source: MYKHEL ಕ್ರೀಡೆ
ಯುಎಇಯಲ್ಲಿ ನಡೆದ ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳಪೆ ಪ್ರದರ್ಶನವನ್ನು ನೀಡಿ ಅಂಕಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಹೀಗಾಗಿ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಯಶಸ್ಸಿನ ಹಾದಿಗೆ ಮರಳಲು ಚೆನ್ನೈ ಸೂಪರ್ ಕಿಂಗ್ಸ್ ತಂಡ ಟೂರ್ನಿ ಆರಂಭಕ್ಕೂ ಮುನ್ನ ಕಠಿಣಾಭ್ಯಾಸವನ್ನು ನಡೆಸಿತ್ತು.
ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ ಎಸ್ ಧೋನಿ ಪಾಲಿಗೆ ಐಪಿಎಲ್ 2021 ಸಕಾರಾತ್ಮಕವಾದ ಆರಂಭವನ್ನು ನೀಡಿಲ್ಲ. ಏಪ್ರಿಲ್ 10ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೋಲುಂಡಿತ್ತು.
ಈ ಪಂದ್ಯದ ಸೋಲಿನ ಜೊತೆಗೆ ಎಂ ಎಸ್ ಧೋನಿಗೆ ಚೆನ್ನೈ ತಂಡ ನಿಧಾನಗತಿಯ ಬೌಲಿಂಗ್ ಮಾಡಿದ ಕಾರಣಕ್ಕೆ 12 ಲಕ್ಷ ದಂಡವನ್ನು ಸಹ ವಿಧಿಸಲಾಗಿತ್ತು. ಐಪಿಎಲ್ 2021ರ ನೀತಿ ಸಂಹಿತೆಯ ಪ್ರಕಾರ ತಂಡವೊಂದು 20 ಓವರ್ಗಳನ್ನು 90 ನಿಮಿಷಗಳಲ್ಲಿ ಮುಗಿಸಬೇಕು, ಇಲ್ಲದಿದ್ದರೆ ಆ ತಂಡದ ನಾಯಕನಿಗೆ 12 ಲಕ್ಷ ದಂಡ ವಿಧಿಸಲಾಗುತ್ತದೆ. ಎಂಎಸ್ ಧೋನಿ ಅವರಿಗೂ ಸಹ ಇದೇ ಮಾದರಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಿಧಾನಗತಿಯ ಬೌಲಿಂಗ್ ಮಾಡಿಸಿದ್ದಕ್ಕೆ ದಂಡ ಹಾಕಲಾಗಿತ್ತು.
ಒಂದು ವೇಳೆ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಎರಡನೇ ಬಾರಿ ನಿಧಾನಗತಿಯ ಬೌಲಿಂಗ್ ಮಾಡಿದರೆ 24 ಲಕ್ಷ ದಂಡ ವಿಧಿಸಲಾಗುವುದು.
ಹಾಗೂ ಮೂರನೇ ಬಾರಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಧಾನಗತಿಯ ಬೌಲಿಂಗ್ ಮಾಡಿದ್ದೇ ಆದಲ್ಲಿ ನಾಯಕ ಎಂಎಸ್ ಧೋನಿಗೆ 30 ಲಕ್ಷ ದಂಡದ ಜೊತೆಗೆ ಒಂದು ಪಂದ್ಯದ ನಿಷೇಧವನ್ನು ನಿಯಮದ ಪ್ರಕಾರ ಹೇರಲಾಗುತ್ತದೆ ಹಾಗೂ ತಂಡಕ್ಕೂ ಕೂಡ 12 ಲಕ್ಷ ದಂಡ ವಿಧಿಸಲಾಗುತ್ತದೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm