ಬ್ರೇಕಿಂಗ್ ನ್ಯೂಸ್
24-04-21 05:56 pm Source: MYKHEL ಕ್ರೀಡೆ
ಏಪ್ರಿಲ್ 24, 'ಗಾರ್ಡ್ ಆಫ್ ಕ್ರಿಕೆಟ್' ಸಚಿನ್ ತೆಂಡೂಲ್ಕರ್ ಅವರ ಜನ್ಮದಿನ. ಈ ದಿನದಂದು ಸಚಿನ್ ತೆಂಡೂಲ್ಕರ್ ಅವರಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು, ಕ್ರಿಕೆಟಿಗರು ಸೇರಿದಂತೆ ಲಕ್ಷಾಂತರ ಜನರಿಂದ ಶುಭಾಶಯಗಳು ಹರಿದು ಬರುತ್ತವೆ. ಇಂದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಸಚಿನ್ ಹುಟ್ಟುಹಬ್ಬಕ್ಕೆ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರು ಸಹ ತಮ್ಮ ಟ್ವಿಟರ್ ಖಾತೆಯ ಮೂಲಕ ಶುಭಾಶಯವನ್ನು ಕೋರಿದ್ದಾರೆ. 'ಕ್ರಿಕೆಟ್ ಇತಿಹಾಸ ಕಂಡ ಅತ್ಯುತ್ತಮ ಆಟಗಾರರಲ್ಲಿ ಒಬ್ಬರಾದ ಸಚಿನ್ ತೆಂಡೂಲ್ಕರ್ ಹಲವಾರು ಜನರಿಗೆ ಸ್ಫೂರ್ತಿಯಾಗಿದ್ದಾರೆ.
ಹುಟ್ಟುಹಬ್ಬದ ಶುಭಾಶಯಗಳು ಸಚಿನ್ ಪಾಜೀ' ಎಂದು ಟ್ವೀಟ್ ಮಾಡುವ ಮೂಲಕ ವಿರಾಟ್ ಕೊಹ್ಲಿ ಸಚಿನ್ ಹುಟ್ಟುಹಬ್ಬಕ್ಕೆ ಶುಭಾಶಯವನ್ನು ಕೋರಿದರು. ಆದರೆ ಇದೀಗ ಈ ಟ್ವೀಟ್ ವಿವಾದದ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಇದಕ್ಕೆ ಕಾರಣ ಇದೇ ವಿರಾಟ್ ಕೊಹ್ಲಿ ಈ ಹಿಂದೆ ವೆಸ್ಟ್ ಇಂಡೀಸ್ನ ಖ್ಯಾತ ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್ ಹುಟ್ಟುಹಬ್ಬಕ್ಕೆ ಮಾಡಿದ್ದ ಟ್ವೀಟ್.
ಮಾರ್ಚ್ 7ನೇ ತಾರೀಕಿನಂದು ವಿವಿಯನ್ ರಿಚರ್ಡ್ಸ್ ಹುಟ್ಟುಹಬ್ಬಕ್ಕೆ ವಿರಾಟ್ ಕೊಹ್ಲಿ 'ಕ್ರಿಕೆಟ್ ಇತಿಹಾಸ ಕಂಡ ಸಾರ್ವಕಾಲಿಕ ಅತ್ಯುತ್ತಮ ಆಟಗಾರ, ಭಯವೇ ಇಲ್ಲದ ರಾಜ ವಿವಿಯನ್ ರಿಚರ್ಡ್ಸ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು' ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿರಾಟ್ ಸಚಿನ್ ಅವರಿಗೆ ವಿಶ್ ಮಾಡುವಾಗ 'ಅತ್ಯುತ್ತಮ ಆಟಗಾರರಲ್ಲಿ ಒಬ್ಬರಾದ ಸಚಿನ್' ಎಂದು ಟ್ವೀಟ್ ಮಾಡಿದ್ದಾರೆ. ಆದರೆ ವಿವಿಯನ್ ರಿಚರ್ಡ್ಸ್ ಅವರಿಗೆ ವಿಶ್ ಮಾಡುವ 'ಕ್ರಿಕೆಟ್ ಇತಿಹಾಸ ಕಂಡ ಅತ್ಯುತ್ತಮ ಆಟಗಾರ ವಿವಿಯನ್ ರಿಚರ್ಡ್ಸ್' ಎಂದು ಟ್ವೀಟ್ ಮಾಡಿದ್ದಾರೆ. ಅಂದರೆ ವಿರಾಟ್ ಕೊಹ್ಲಿ ಪ್ರಕಾರ ಸಚಿನ್ಗಿಂತ ವಿವಿಯನ್ ರಿಚರ್ಡ್ಸ್ ಕ್ರಿಕೆಟ್ ಜಗತ್ತಿನ ಅತ್ಯುತ್ತಮ ಆಟಗಾರರಾ? ಎಂಬ ಚರ್ಚೆಗಳು ಮತ್ತು ಟೀಕೆಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
This News Article Is A Copy Of MYKHEL
15-10-25 03:35 pm
Bangalore Correspondent
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 05:36 pm
Mangalore Correspondent
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm