ಬ್ರೇಕಿಂಗ್ ನ್ಯೂಸ್
24-04-21 05:56 pm Source: MYKHEL ಕ್ರೀಡೆ
ಏಪ್ರಿಲ್ 24, 'ಗಾರ್ಡ್ ಆಫ್ ಕ್ರಿಕೆಟ್' ಸಚಿನ್ ತೆಂಡೂಲ್ಕರ್ ಅವರ ಜನ್ಮದಿನ. ಈ ದಿನದಂದು ಸಚಿನ್ ತೆಂಡೂಲ್ಕರ್ ಅವರಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು, ಕ್ರಿಕೆಟಿಗರು ಸೇರಿದಂತೆ ಲಕ್ಷಾಂತರ ಜನರಿಂದ ಶುಭಾಶಯಗಳು ಹರಿದು ಬರುತ್ತವೆ. ಇಂದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಸಚಿನ್ ಹುಟ್ಟುಹಬ್ಬಕ್ಕೆ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರು ಸಹ ತಮ್ಮ ಟ್ವಿಟರ್ ಖಾತೆಯ ಮೂಲಕ ಶುಭಾಶಯವನ್ನು ಕೋರಿದ್ದಾರೆ. 'ಕ್ರಿಕೆಟ್ ಇತಿಹಾಸ ಕಂಡ ಅತ್ಯುತ್ತಮ ಆಟಗಾರರಲ್ಲಿ ಒಬ್ಬರಾದ ಸಚಿನ್ ತೆಂಡೂಲ್ಕರ್ ಹಲವಾರು ಜನರಿಗೆ ಸ್ಫೂರ್ತಿಯಾಗಿದ್ದಾರೆ.
ಹುಟ್ಟುಹಬ್ಬದ ಶುಭಾಶಯಗಳು ಸಚಿನ್ ಪಾಜೀ' ಎಂದು ಟ್ವೀಟ್ ಮಾಡುವ ಮೂಲಕ ವಿರಾಟ್ ಕೊಹ್ಲಿ ಸಚಿನ್ ಹುಟ್ಟುಹಬ್ಬಕ್ಕೆ ಶುಭಾಶಯವನ್ನು ಕೋರಿದರು. ಆದರೆ ಇದೀಗ ಈ ಟ್ವೀಟ್ ವಿವಾದದ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಇದಕ್ಕೆ ಕಾರಣ ಇದೇ ವಿರಾಟ್ ಕೊಹ್ಲಿ ಈ ಹಿಂದೆ ವೆಸ್ಟ್ ಇಂಡೀಸ್ನ ಖ್ಯಾತ ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್ ಹುಟ್ಟುಹಬ್ಬಕ್ಕೆ ಮಾಡಿದ್ದ ಟ್ವೀಟ್.

ಮಾರ್ಚ್ 7ನೇ ತಾರೀಕಿನಂದು ವಿವಿಯನ್ ರಿಚರ್ಡ್ಸ್ ಹುಟ್ಟುಹಬ್ಬಕ್ಕೆ ವಿರಾಟ್ ಕೊಹ್ಲಿ 'ಕ್ರಿಕೆಟ್ ಇತಿಹಾಸ ಕಂಡ ಸಾರ್ವಕಾಲಿಕ ಅತ್ಯುತ್ತಮ ಆಟಗಾರ, ಭಯವೇ ಇಲ್ಲದ ರಾಜ ವಿವಿಯನ್ ರಿಚರ್ಡ್ಸ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು' ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿರಾಟ್ ಸಚಿನ್ ಅವರಿಗೆ ವಿಶ್ ಮಾಡುವಾಗ 'ಅತ್ಯುತ್ತಮ ಆಟಗಾರರಲ್ಲಿ ಒಬ್ಬರಾದ ಸಚಿನ್' ಎಂದು ಟ್ವೀಟ್ ಮಾಡಿದ್ದಾರೆ. ಆದರೆ ವಿವಿಯನ್ ರಿಚರ್ಡ್ಸ್ ಅವರಿಗೆ ವಿಶ್ ಮಾಡುವ 'ಕ್ರಿಕೆಟ್ ಇತಿಹಾಸ ಕಂಡ ಅತ್ಯುತ್ತಮ ಆಟಗಾರ ವಿವಿಯನ್ ರಿಚರ್ಡ್ಸ್' ಎಂದು ಟ್ವೀಟ್ ಮಾಡಿದ್ದಾರೆ. ಅಂದರೆ ವಿರಾಟ್ ಕೊಹ್ಲಿ ಪ್ರಕಾರ ಸಚಿನ್ಗಿಂತ ವಿವಿಯನ್ ರಿಚರ್ಡ್ಸ್ ಕ್ರಿಕೆಟ್ ಜಗತ್ತಿನ ಅತ್ಯುತ್ತಮ ಆಟಗಾರರಾ? ಎಂಬ ಚರ್ಚೆಗಳು ಮತ್ತು ಟೀಕೆಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm