ಬ್ರೇಕಿಂಗ್ ನ್ಯೂಸ್
03-05-21 03:30 pm Source: MYKHEL Madhukara Shetty ಕ್ರೀಡೆ
ಶ್ರೀಲಂಕಾ ಕ್ರಿಕೆಟ್ ತಂಡದ ಆಲ್ರೌಂಡರ್ ತಿಸಾರ ಪೆರೆರ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯವನ್ನು ಘೋಷಿಸಿದ್ದಾರೆ. ಈ ಮೂಲಕ ಲಂಕಾ ಕ್ರಿಕೆಟ್ ಪ್ರೇಮಿಗಳಿಗೆ ಪೆರೆರ ಆಘಾತವನ್ನು ನೀಡಿದ್ದಾರೆ. ಶ್ರೀಲಂಕಾ ಕ್ರಿಕೆಟ್ ತಂಡದ ಈ ಅನುಭವಿ ಆಟಗಾರ 32ರ ಹರೆಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ದೂರ ಸರಿಯುವ ನಿರ್ಧಾರ ತೆಗೆದುಕೊಂಡಿರುವುದು ಅಚ್ಚರಿ ಮೂಡಿಸಿದೆ.
ಮೂಲಗಳ ಮಾಹಿತಿಯ ಪ್ರಕಾರ ತಿಸಾರ ಪೆರೆರ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ತೆಗೆದುಕೊಳ್ಳುವ ನಿರ್ಧಾರವನ್ನು ಶ್ರೀಲಂಕಾ ಕ್ರಿಕೆಟ್ ಮಂಡಳಿಗೆ ಮಾಹಿತಿಯನ್ನು ನೀಡಿದ್ದಾರೆ ಎನ್ನಲಾಗಿದೆ. ಶ್ರೀಲಂಕಾದ ಈ ಆಟಗಾರ 2009ರಲ್ಲಿ ಏಕದಿನ ಕ್ರಿಕೆಟ್ಗೆ, 2010ರಲ್ಲಿ ಟಿ20 ಹಾಗೂ 2011ರಲ್ಲಿ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆಯನ್ನು ಮಾಡಿದ್ದಾರೆ.
ಒಟ್ಟು 8 ಟೆಸ್ಟ್ ಪಂದ್ಯಗಳಲ್ಲಿ ಶ್ರಿಲಂಕಾ ತಂಡವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿರುವ ಪೆರೆರ ಒಂದು ಅರ್ಧ ಶತಕದ ಸಹಿತ 203 ರನ್ಗಳಿಸಿದ್ದಾರೆ. 166 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 2338 ರನ್ ಹಾಗೂ 175 ವಿಕೆಟ್ ಪಡೆದುಕೊಂಡಿದ್ದರೆ 84 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಆಡಿದ್ದು 1204 ರನ್ ಹಾಗೂ 51 ವಿಕೆಟ್ ಸಂಪಾದಿಸಿದ್ದಾರೆ.
ಐಪಿಎಲ್ನಲ್ಲಿಯೂ ಆಡಿದ ಅನುಭವ ಹೊಂದಿರುವ ಪೆರೆರಾ ಈ ಬಾರಿ ಐಪಿಎಲ್ನಲ್ಲಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಹರಾಜು ಪ್ರಕ್ರಿಯೆಗೆ ಹೆಸರನ್ನು ನೊಂದಾಯಿಸಿದ್ದರು. 50 ಲಕ್ಷ ಮೂಲ ಬೆಲೆ ಹೊಂದಿದ್ದ ಪೆರೆರ ಅವರನ್ನು ಯಾವುದೇ ಫ್ರಾಂಚೈಸಿ ಕೊಂಡುಕೊಳ್ಳುವ ಮನಸ್ಸು ಮಾಡದ ಕಾರಣ ಹರಾಜಾಗದೆ ಉಳಿದುಕೊಂಡಿದ್ದರು. ಶ್ರೀಲಂಕಾ ಕ್ರಿಕೆಟ್ ಮಂಡಳಿ ಇತ್ತೀಚೆಗೆ ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ಅನುಭವಿ ಆಟಗಾರರನ್ನು ಪರಿಗಣಿಸದಿರುವ ನಿರ್ಧಾರವನ್ನು ತೆಗೆದುಕೊಂಡಿತ್ತು. ಇದೇ ಕಾರಣದಿಂದಾಗಿ ಪೆರೆರ ತಮ್ಮ ಅಂತಾರಾಷ್ಟ್ರೀಯ ನಿವೃತ್ತಿ ಘೋಷಣೆಯನ್ನು ಹಠಾತ್ ಆಗಿ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.
This News Article Is A Copy Of MYKHEL
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm