ಬ್ರೇಕಿಂಗ್ ನ್ಯೂಸ್
11-05-21 04:42 pm MYKHEL: Srinivasa A ಕ್ರೀಡೆ
ಕೊರೊನಾವೈರಸ್ ಕಾರಣದಿಂದಾಗಿ ಪ್ರಸ್ತುತ ಐಪಿಎಲ್ ಟೂರ್ನಿ ಮುಂದೂಡಲ್ಪಟ್ಟ ಬಳಿಕ ಇದೀಗ ಕ್ರೀಡಾಭಿಮಾನಿಗಳ ಚಿತ್ತ ಜೂನ್ 18ರಿಂದ ಇಂಗ್ಲೆಂಡ್ನಲ್ಲಿ ಶುರುವಾಗಲಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಹಾಗೂ ಇನ್ನೂ ಹಲವು ಟೂರ್ನಿಗಳ ಮೇಲಿದೆ. ಬಿಸಿಸಿಐ ಈಗಾಗಲೇ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಮತ್ತು ಇಂಗ್ಲೆಂಡ್ ವಿರುದ್ಧದ 5ವಪಂದ್ಯಗಳ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಿದೆ.
ಜೂನ್ 18ರಿಂದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ನ್ಯೂಜಿಲೆಂಡ್ ವಿರುದ್ಧ ನಡೆದರೆ, ಆಗಸ್ಟ್ ತಿಂಗಳಿನಲ್ಲಿ ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳ ಸರಣಿ ನಡೆಯಲಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಮತ್ತು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಎರಡೂ ಕೂಡ ಇಂಗ್ಲೆಂಡ್ನಲ್ಲಿಯೇ ನಡೆಯಲಿದೆ. ಇದರ ನಡುವೆ ಜುಲೈ ತಿಂಗಳಿನಲ್ಲಿ ಟೀಮ್ ಇಂಡಿಯಾ ಶ್ರೀಲಂಕಾ ಪ್ರವಾಸವನ್ನು ಕೈಗೊಳ್ಳಲಿದೆ. ಹೀಗಾಗಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯ ಹಾಗೂ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿರುವ ಆಟಗಾರರ ಬದಲು ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಕೆಲವೊಂದಿಷ್ಟು ಭಾರತೀಯ ಆಟಗಾರರನ್ನು ಶ್ರೀಲಂಕಾ ವಿರುದ್ಧದ ಸರಣಿಗೆ ಬಿಸಿಸಿಐ ಆಯ್ಕೆ ಮಾಡಲಿದೆ.
ಶಿಖರ್ ಧವನ್, ಹಾರ್ದಿಕ್ ಪಾಂಡ್ಯ, ಪೃಥ್ವಿ ಶಾ, ಭುವನೇಶ್ವರ್ ಕುಮಾರ್ ಹಾಗೂ ಸಂಜು ಸ್ಯಾಮ್ಸನ್ ಸೇರಿದಂತೆ ಇನ್ನೂ ಹಲವಾರು ಆಟಗಾರರನ್ನೊಳಗೊಂಡ ತಂಡವನ್ನು ಶ್ರೀಲಂಕಾ ಪ್ರವಾಸಕ್ಕೆ ಬಿಸಿಸಿಐ ಕಳುಹಿಸಲಿದೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮ ಶ್ರೀಲಂಕಾ ಪ್ರವಾಸಕ್ಕೆ ಅಲಭ್ಯರಾಗುವ ಕಾರಣದಿಂದ ಈ ತಂಡಕ್ಕೆ ಯಾವ ಆಟಗಾರನನ್ನು ನಾಯಕನನ್ನಾಗಿ ನೇಮಿಸುತ್ತಾರೆ ಎಂಬ ಚರ್ಚೆಗಳು ಜೋರಾಗಿವೆ. ಈ ಕುರಿತು ಮಾಜಿ ಕ್ರಿಕೆಟಿಗ ರೀತಿಂದರ್ ಸಿಂಗ್ ಸೋಧಿ ಪ್ರತಿಕ್ರಿಯಿಸಿದ್ದು ಹಾರ್ದಿಕ್ ಪಾಂಡ್ಯ ಅನುಭವಿ ಆಟಗಾರನಾಗಿದ್ದು ಅವರನ್ನೇ ಲಂಕಾ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ನಾಯಕನನ್ನಾಗಿ ನೇಮಿಸಬೇಕು ಎಂದಿದ್ದಾರೆ.
ಲಂಕಾ ವಿರುದ್ಧದ ಸರಣಿಗಳ ವಿವರ : ಭಾರತ ಮತ್ತು ಶ್ರೀಲಂಕಾ ನಡುವೆ 3 ಏಕದಿನ ಪಂದ್ಯಗಳು ಜುಲೈ 13, 16 ಹಾಗೂ 19ರಂದು ಮತ್ತು 3 ಟಿ ಟ್ವೆಂಟಿ ಪಂದ್ಯಗಳು ಜುಲೈ 22, 24 ಹಾಗೂ 27ರಂದು ನಡೆಯಲಿದ್ದು, ಎಲ್ಲಾ ಪಂದ್ಯಗಳು ಸಹ ಕೊಲಂಬೊನ ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆಯಲಿವೆ.
(Kannada Copy of Mykhel Kannada)
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm