ಬ್ರೇಕಿಂಗ್ ನ್ಯೂಸ್
27-08-20 10:34 pm Headline Karnataka News Network ಕ್ರೀಡೆ
ಮೆಲ್ಬೊರ್ನ್: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಹಾಲ್ ಆಫ್ ಫೇಮ್ ಕ್ರಿಕೆಟಿಗರ ಪಟ್ಟಿಯಲ್ಲಿ ಸ್ಥಾನ ಪಡೆಯುವುದು ಅತ್ಯಂತ ಗೌರವದ ಸಾಧನೆಯಾಗಿದೆ.
ಕ್ರಿಕೆಟ್ನಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಮಂದಿಗೆ ಮಾತ್ರ ಈ ಗೌರವ ಪಡೆಯುವ ಅರ್ಹತೆ ಲಭಿಸುತ್ತದೆ. ಕಳೆದ ವಾರ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಲಿಸಾ ಸ್ಥಳೇಕರ್, ಪಾಕ್ ಮಾಜಿ ಆಟಗಾರ ಜಹೀರ್ ಅಬ್ಬಾಸ್, ದಕ್ಷಿಣ ಆಫ್ರಿಕಾ ಆಲ್ರೌಂಡರ್ ಜಾಕ್ ಕಾಲಿಸ್ ಅವರಿಗೆ ಐಸಿಸಿ ಹಾಲ್ ಆಫ್ ಫೇಮ್ ಪ್ರಶಸ್ತಿ ನೀಡಿದೆ. ಲೀಸಾ ಸ್ಥಳೇಕರ್ ಈ ಪ್ರಶಸ್ತಿಯನ್ನು ಪಡೆದ 9ನೇ ಮಹಿಳಾ ಕ್ರಿಕೆಟ್ ಆಟಗಾರ್ತಿ ಎಂಬ ಹೆಗ್ಗಳಿಕೆಯನ್ನು ಪಡೆದಿದ್ದಾರೆ.
ಭಾರತದಲ್ಲಿ ಜನಿಸಿದ್ದ ಲಿಸಾ ಸ್ಥಳೇಕರ್ ಅವರನ್ನು ಆಸ್ಟ್ರೇಲಿಯಾದ ಹರೇನ್ ಮತ್ತು ಸ್ಯೂ ಸ್ಥಳೇಕರ್ ಅವರು ಪುಣೆಯ ಒಂದು ಅನಾಥ ಆಶ್ರಮದಲ್ಲಿ ದತ್ತು ಪಡೆದ ಸಂದರ್ಭದಲ್ಲಿ ಆಕೆಗೆ ಕೇವಲ ಮೂರು ವಾರ ವಯಸ್ಸಾಗಿತ್ತು. ಬಳಿಕ ಆಸ್ಟ್ರೇಲಿಯಾಗೆ ಲಿಸಾ ಪೋಷಕರು ಕರೆದುಕೊಂಡು ಹೋಗಿದ್ದರು. ಇತ್ತೀಚೆಗೆ ತಮ್ಮ ತಂದೆಗೆ ಬಗ್ಗೆ ಮಾತನಾಡಿದ್ದ ಸ್ಥಳೇಕರ್, ನನ್ನ ತಂದೆಗೆ ಕ್ರಿಕೆಟ್ ಎಂದರೇ ತುಂಬಾ ಇಷ್ಟ. ಆದ್ದರಿಂದ ನಾನು ಕ್ರಿಕೆಟ್ ಆಡುತ್ತಿದ್ದೆ. 8-9 ವಯಸ್ಸಿನ ವೇಳೆಗೆ ಕ್ರಿಕೆಟನ್ನು ಪೂರ್ತಿಯಾಗಿ ಇಷ್ಟಪಟ್ಟಿದೆ ಎಂದು ತಿಳಿಸಿದ್ದರು.

1990ರಲ್ಲಿ ಮಹಿಳಾ ರಾಷ್ಟ್ರೀಯ ಕ್ರಿಕೆಟ್ ಲೀಗ್ ಮೂಲಕ ಪಾದಾರ್ಪಣೆ ಮಾಡಿ ಸುದೀರ್ಘ ಕಾಲ ಕ್ರಿಕೆಟ್ ಆಡಿದ್ದ ಸ್ಥಳೇಕರ್, ಆಸೀಸ್ ಪರ ನಾಲ್ಕು ವಿಶ್ವಕಪ್ಗಳನ್ನು ಆಡಿದ್ದಾರೆ. ಆಸೀಸ್ ಪರ 8 ಟೆಸ್ಟ್, 125 ಏಕದಿನ, 54 ಟಿ20 ಪಂದ್ಯಗಳನ್ನಾಡಿದ್ದಾರೆ. ಏಕದಿನ ಕ್ರಿಕೆಟ್ನಲ್ಲಿ 1 ಸಾವಿರ ರನ್ ಹಾಗೂ 100 ವಿಕೆಟ್ ಪಡೆದ ಮೊದಲ ಆಟಗಾರ್ತಿ ಎಂಬ ದಾಖಲೆಯನ್ನು ಹೊಂದಿದ್ದಾರೆ. ಕ್ರಿಕೆಟ್ ನಿವೃತ್ತಿ ಹೇಳಿದ ಬಳಿಕ ಕ್ರಿಕೆಟ್ ವಿಶ್ಲೇಷಣೆ, ಕೋಚ್, ಕ್ರಿಕೆಟ್ ಅಸೋಸಿಶಿಯೇಷನ್ ಸದಸ್ಯರಾಗಿ ಕ್ರಿಕೆಟ್ ಸೇವೆಯನ್ನು ಮುಂದುವರಿಸಿದ್ದಾರೆ.
ಕ್ರಿಕೆಟ್ನಲ್ಲಿ ಮಾತ್ರವಲ್ಲದೇ ಮೈದಾನದ ಹೊರಗೂ ಸ್ಥಳೇಕರ್ ಅನೇಕ ಮೈಲಿಗಲ್ಲುಗಳಿಗೆ ಕಾರಣರಾಗಿದ್ದು, ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯಲ್ಲಿ ಸ್ಥಾನ ಪಡೆದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm