ಬ್ರೇಕಿಂಗ್ ನ್ಯೂಸ್
01-09-20 10:52 am Headline Karnataka News Network ಕ್ರೀಡೆ
ಅಬುಧಾಬಿ: ಐಪಿಎಲ್ ಆರಂಭಿಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬದಲು ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಲಿದೆ ಎಂದು ಹೇಳಲಾಗಿದೆ.
ಸೆಪ್ಟೆಂಬರ್ 19ರಿಂದ ಐಪಿಎಲ್ ಆರಂಭವಾಗಲಿದೆ. ವಾಡಿಕೆಯಂತೆ ಕಳೆದ ಐಪಿಎಲ್ನ ಫೈನಲ್ನಲ್ಲಿ ಮುಖಾಮುಖಿಯಾಗಿದ್ದ ಸಿಎಸ್ಕೆ ಮತ್ತು ಮುಂಬೈ ತಂಡದ ಈ ಟೂರ್ನಿಯ ಮೊದಲ ಪಂದ್ಯವನ್ನು ಆಡಬೇಕಿತ್ತು. ಆದರೆ ಸಿಎಸ್ಕೆ ತಂಡದ ಕೆಲ ಸಹಾಯಕ ಸಿಬ್ಬಂದಿ ಮತ್ತು ಇಬ್ಬರು ಆಟಗಾರರಿಗೆ ಕೊರೊನಾ ಬಂದ ಕಾರಣ ಚೆನ್ನೈ ತಂಡ ಮೊದಲ ಪಂದ್ಯವನ್ನು ಆಡಲು ಸಾಧ್ಯವಿಲ್ಲ ಎಂದು ಹೇಳಲಾಗಿದೆ.
ಐಪಿಎಲ್ನ ಆರಂಭಿಕ ಪಂದ್ಯದಲ್ಲಿ ನಾಲ್ಕು ಬಾರಿ ಐಪಿಎಲ್ ಟ್ರೋಫಿ ಗೆದ್ದ ಮುಂಬೈ ತಂಡ ಮತ್ತು ಮೂರು ಬಾರಿ ಚಾಂಪಿಯನ್ ಆಗಿರುವ ಚೆನ್ನೈ ತಂಡವನ್ನು ಆಡಿಸಲು ಬಿಸಿಸಿಐ ತೀರ್ಮಾನ ಮಾಡಿತ್ತು. ಆದರೆ ಈ ನಡುವೆ ಈ ಪಂದ್ಯಕ್ಕೆ ಕೊರೊನಾ ಅಡ್ಡಗಾಲು ಹಾಕಿದ್ದು, ಸೆಪ್ಟೆಂಬರ್ 19ರೊಳಗೆ ಸಿಎಸ್ಕೆ ತಂಡದ ಆಟಗಾರರು ಸೋಂಕಿನಿಂದ ಹೊರಬರುವುದು ಡೌಟು ಎನ್ನಲಾಗಿದೆ. ಈ ಕಾರಣಕ್ಕೆ ಐಪಿಎಲ್ನಲ್ಲಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಆರ್ಸಿಬಿ ತಂಡ ಆರಂಭಿಕ ಪಂದ್ಯವನ್ನು ಆಡಲಿದೆ ಎನ್ನಲಾಗಿದೆ.
ಈ ವಿಚಾರವಾಗಿ ಬಿಸಿಸಿಐ ಉನ್ನತ ಮೂಲಗಳಿಂದ ಮಾಹಿತಿ ಹೊರಬಿದ್ದಿದ್ದು, ಈ ಬಾರಿ ಐಪಿಎಲ್ ಆರಂಭಿಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯುವುದು ಬಹುತೇಕ ಪಕ್ಕಾ ಆಗಿದೆ. ಮೊದಲ ಪಂದ್ಯದಲ್ಲಿ ಸ್ಟಾರ್ ಆಟಗಾರರು ಮೈದಾನಕ್ಕೆ ಇಳಿದರೆ, ಆಟದ ಕ್ರೇಜ್ ಜಾಸ್ತಿಯಾಗುತ್ತದೆ. ಒಂದು ಕಡೆ ರೋಹಿತ್ ಸಿದ್ಧವಾಗಿದ್ದಾರೆ. ಆದರೆ ಧೋನಿಯವರ ತಂಡ ಆಡುವುದು ಅನುಮಾನವಾಗಿದೆ. ಹೀಗಾಗಿ ಕೊಹ್ಲಿ ನೇತೃತ್ವದ ಆರ್ಸಿಬಿ ತಂಡವನ್ನು ಆಡಿಸಲು ತಯಾರಿ ನಡೆದಿದೆ ಎಂದು ತಿಳಿದು ಬಂದಿದೆ.
ಸೆ.19ರ ವೇಳೆಗೆ ಚೆನ್ನೈ ತಂಡ ಪೂರ್ಣ ಪ್ರಮಾಣದಲ್ಲಿ ಕೊರೊನಾದಿಂದ ಚೇತರಿಸಿಕೊಳ್ಳುವುದು ಕಷ್ಟಸಾಧ್ಯ ಎಂಬ ಅಭಿಪ್ರಾಯ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಟೂರ್ನಿಯ ಶೆಡ್ಯೂಲ್ನಲ್ಲಿ ಸಣ್ಣ ಬದಲಾವಣೆ ಮಾಡಿ ಮೊದಲ ಪಂದ್ಯದಲ್ಲಿ ಆರ್ಸಿಬಿ ತಂಡವನ್ನು ಕಣಕ್ಕೆ ಇಳಿಸಲು ಚಿಂತನೆ ನಡೆಸಲಾಗಿದೆ. ಇತ್ತ ಎರಡು ದಿನಗಳ ಅವಧಿಯಲ್ಲಿ ಚೆನ್ನೈ ತಂಡದಲ್ಲಿ 12 ಕೊರೊನಾ ಪ್ರಕರಣಗಳು ಪತ್ತೆಯಾಗಿವುದರಿಂದ ಮತ್ತಷ್ಟು ಪಾಸಿಟಿವ್ ಪ್ರಕರಣಗಳು ವರದಿಯಾಗುವ ನಿರೀಕ್ಷೆ ಇದೆ.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm