ಬ್ರೇಕಿಂಗ್ ನ್ಯೂಸ್
01-09-20 10:52 am Headline Karnataka News Network ಕ್ರೀಡೆ
ಅಬುಧಾಬಿ: ಐಪಿಎಲ್ ಆರಂಭಿಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬದಲು ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಲಿದೆ ಎಂದು ಹೇಳಲಾಗಿದೆ.
ಸೆಪ್ಟೆಂಬರ್ 19ರಿಂದ ಐಪಿಎಲ್ ಆರಂಭವಾಗಲಿದೆ. ವಾಡಿಕೆಯಂತೆ ಕಳೆದ ಐಪಿಎಲ್ನ ಫೈನಲ್ನಲ್ಲಿ ಮುಖಾಮುಖಿಯಾಗಿದ್ದ ಸಿಎಸ್ಕೆ ಮತ್ತು ಮುಂಬೈ ತಂಡದ ಈ ಟೂರ್ನಿಯ ಮೊದಲ ಪಂದ್ಯವನ್ನು ಆಡಬೇಕಿತ್ತು. ಆದರೆ ಸಿಎಸ್ಕೆ ತಂಡದ ಕೆಲ ಸಹಾಯಕ ಸಿಬ್ಬಂದಿ ಮತ್ತು ಇಬ್ಬರು ಆಟಗಾರರಿಗೆ ಕೊರೊನಾ ಬಂದ ಕಾರಣ ಚೆನ್ನೈ ತಂಡ ಮೊದಲ ಪಂದ್ಯವನ್ನು ಆಡಲು ಸಾಧ್ಯವಿಲ್ಲ ಎಂದು ಹೇಳಲಾಗಿದೆ.
ಐಪಿಎಲ್ನ ಆರಂಭಿಕ ಪಂದ್ಯದಲ್ಲಿ ನಾಲ್ಕು ಬಾರಿ ಐಪಿಎಲ್ ಟ್ರೋಫಿ ಗೆದ್ದ ಮುಂಬೈ ತಂಡ ಮತ್ತು ಮೂರು ಬಾರಿ ಚಾಂಪಿಯನ್ ಆಗಿರುವ ಚೆನ್ನೈ ತಂಡವನ್ನು ಆಡಿಸಲು ಬಿಸಿಸಿಐ ತೀರ್ಮಾನ ಮಾಡಿತ್ತು. ಆದರೆ ಈ ನಡುವೆ ಈ ಪಂದ್ಯಕ್ಕೆ ಕೊರೊನಾ ಅಡ್ಡಗಾಲು ಹಾಕಿದ್ದು, ಸೆಪ್ಟೆಂಬರ್ 19ರೊಳಗೆ ಸಿಎಸ್ಕೆ ತಂಡದ ಆಟಗಾರರು ಸೋಂಕಿನಿಂದ ಹೊರಬರುವುದು ಡೌಟು ಎನ್ನಲಾಗಿದೆ. ಈ ಕಾರಣಕ್ಕೆ ಐಪಿಎಲ್ನಲ್ಲಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಆರ್ಸಿಬಿ ತಂಡ ಆರಂಭಿಕ ಪಂದ್ಯವನ್ನು ಆಡಲಿದೆ ಎನ್ನಲಾಗಿದೆ.
ಈ ವಿಚಾರವಾಗಿ ಬಿಸಿಸಿಐ ಉನ್ನತ ಮೂಲಗಳಿಂದ ಮಾಹಿತಿ ಹೊರಬಿದ್ದಿದ್ದು, ಈ ಬಾರಿ ಐಪಿಎಲ್ ಆರಂಭಿಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯುವುದು ಬಹುತೇಕ ಪಕ್ಕಾ ಆಗಿದೆ. ಮೊದಲ ಪಂದ್ಯದಲ್ಲಿ ಸ್ಟಾರ್ ಆಟಗಾರರು ಮೈದಾನಕ್ಕೆ ಇಳಿದರೆ, ಆಟದ ಕ್ರೇಜ್ ಜಾಸ್ತಿಯಾಗುತ್ತದೆ. ಒಂದು ಕಡೆ ರೋಹಿತ್ ಸಿದ್ಧವಾಗಿದ್ದಾರೆ. ಆದರೆ ಧೋನಿಯವರ ತಂಡ ಆಡುವುದು ಅನುಮಾನವಾಗಿದೆ. ಹೀಗಾಗಿ ಕೊಹ್ಲಿ ನೇತೃತ್ವದ ಆರ್ಸಿಬಿ ತಂಡವನ್ನು ಆಡಿಸಲು ತಯಾರಿ ನಡೆದಿದೆ ಎಂದು ತಿಳಿದು ಬಂದಿದೆ.
ಸೆ.19ರ ವೇಳೆಗೆ ಚೆನ್ನೈ ತಂಡ ಪೂರ್ಣ ಪ್ರಮಾಣದಲ್ಲಿ ಕೊರೊನಾದಿಂದ ಚೇತರಿಸಿಕೊಳ್ಳುವುದು ಕಷ್ಟಸಾಧ್ಯ ಎಂಬ ಅಭಿಪ್ರಾಯ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಟೂರ್ನಿಯ ಶೆಡ್ಯೂಲ್ನಲ್ಲಿ ಸಣ್ಣ ಬದಲಾವಣೆ ಮಾಡಿ ಮೊದಲ ಪಂದ್ಯದಲ್ಲಿ ಆರ್ಸಿಬಿ ತಂಡವನ್ನು ಕಣಕ್ಕೆ ಇಳಿಸಲು ಚಿಂತನೆ ನಡೆಸಲಾಗಿದೆ. ಇತ್ತ ಎರಡು ದಿನಗಳ ಅವಧಿಯಲ್ಲಿ ಚೆನ್ನೈ ತಂಡದಲ್ಲಿ 12 ಕೊರೊನಾ ಪ್ರಕರಣಗಳು ಪತ್ತೆಯಾಗಿವುದರಿಂದ ಮತ್ತಷ್ಟು ಪಾಸಿಟಿವ್ ಪ್ರಕರಣಗಳು ವರದಿಯಾಗುವ ನಿರೀಕ್ಷೆ ಇದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm