ಬ್ರೇಕಿಂಗ್ ನ್ಯೂಸ್
01-07-21 02:48 pm MYKHEL: Sadashiva ಕ್ರೀಡೆ
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಆಕರ್ಷಣೀಯ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ನೂತನ ಅಧ್ಯಕ್ಷರಾಗಿ ಪ್ರಥಮೇಶ್ ಮಿಶ್ರಾ ಆಯ್ಕೆಯಾಗಿದ್ದಾರೆ. ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಗುರುವಾರ (ಜುಲೈ 1) ಮಿಶ್ರಾ ಅವರನ್ನು ತಮ್ಮ ನೂತನ ಅಧ್ಯಕ್ಷರೆಂದು ಘೋಷಿಸಿದೆ.
ಡಿಯಾಗೋ ಇಂಡಿಯಾದ ಅಂಗ ಸಂಸ್ಥೆಯಾಗಿರುವ ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್, ಆರ್ಸಿಬಿಯ ಮಾಲೀಕತ್ವ ಹೊಂದಿದೆ. ಪ್ರಥಮೇಶ್ ಮಿಶ್ರಾ ಸದ್ಯ ಡಿಯಾಗೋ ಇಂಡಿಯಾದಲ್ಲಿ ಮುಖ್ಯ ವ್ಯವಹಾರ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಭಾರತದ ನಾಯಕ ವಿರಾಟ್ ಕೊಹ್ಲಿ ಆರ್ಸಿಬಿ ನಾಯಕತ್ವ ಹೊಂದಿದ್ದರೆ, ನ್ಯೂಜಿಲೆಂಡ್ ಮಾಜಿ ಕ್ರಿಕೆಟಿಗ ಮೈಕ್ ಹೆಸನ್ ಮತ್ತು ಆಸ್ಟ್ರೇಲಿಯಾದ ಮಾಜಿ ಆಟಗಾರ ಸೈಮನ್ ಕಟಿಚ್ ತಂಡದ ಕೋಚಿಂಗ್ ವಿಭಾಗದಲ್ಲಿದ್ದಾರೆ.

ಮಿಶ್ರಾ ಅವರು ಮೊದಲು ಆರ್ಸಿಬಿ ಅಧ್ಯಕ್ಷರಾಗಿದ್ದ ಆನಂದ್ ಕೃಪಾಲು ಸ್ಥಾನ ತುಂಬಲಿದ್ದಾರೆ. ಕೃಪಾಲು ಅವರ ಡಿಯಾಗೋ ಇಂಡಿಯಾದ ನಿರ್ವಹಣಾ ನಿರ್ದೇಶಕ ಮತ್ತು ಸಿಇಒ ಕರ್ತವ್ಯ ಜೂನ್ 30ಕ್ಕೆ ಕೊನೆಗೊಂಡಿದೆ. ಒಮ್ಮೆಯೂ ಐಪಿಎಲ್ ಟ್ರೋಫಿ ಗೆಲ್ಲದ ಅರ್ಸಿಬಿ ಈ ಬಾರಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಟ್ರೋಫಿಯ ನಿರೀಕ್ಷೆ ಮೂಡಿಸಿದೆ.
"ರಾಯಲ್ ಚಾಲೆಂಜರ್ಸ್ ಬೆಂಗಳೂರು ಡಿಯಾಗೋ ಇಂಡಿಯಾದ ಅವಿಭಾಜ್ಯ ಅಂಗವಾಗಿದ್ದು, ನಾವೆಲ್ಲರೂ ತಂಡದ ಬಗ್ಗೆ ಹೆಚ್ಚಿನ ಉತ್ಸಾಹವನ್ನು ಹೊಂದಿದ್ದೇವೆ. ವಿರಾಟ್ ಕೊಹ್ಲಿ, ಮೈಕ್ ಹೆಸನ್ ಮತ್ತು ಸೈಮನ್ ಕಟಿಚ್ ಅವರೊಂದಿಗೆ ತಂಡದ ಏಳಿಗೆಗೆ ನನ್ನ ಭುಜವನ್ನು ಸೇರಿಸುವ ಬಗ್ಗೆ ಮತ್ತು ನಾವು ಮೈದಾನದಲ್ಲಿ ಮತ್ತು ಹೊರಗೆ ಮಾಡುವ ಎಲ್ಲಾ ಕೆಲಸಗಳಲ್ಲಿಯೂ ಧೈರ್ಯದಿಂದ ಪಾಲ್ಗೊಳ್ಳುವ ಬಗ್ಗೆ ನಾನು ಉತ್ಸುಕನಾಗಿದ್ದೇನೆ. ಆರ್ಸಿಬಿಗೆ ಆನಂದ್ ನೀಡಿದ ಅಪಾರ ಕೊಡುಗೆಗಾಗಿ ನಾನು ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತಿದ್ದೇನೆ," ಎಂದು ಪ್ರಥಮೇಶ್ ಮಿಶ್ರಾ ಹೇಳಿದ್ದಾರೆ.
(Kannada Copy of Mykhel Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm