ಬ್ರೇಕಿಂಗ್ ನ್ಯೂಸ್
03-07-21 10:34 am MYKHEL: Madhukara Shetty ಕ್ರೀಡೆ
ನವದೆಹಲಿ, ಜುಲೈ 3: ಭಾರತದ ಭರವಸೆಯ ಈಜುಪಟು ಮಾನಾ ಪಟೇಲ್ ಶುಕ್ರವಾರ ಐಡಿಹಾಸಿಕ ಸಾಧನೆಯನ್ನು ಮಾಡಿದ್ದಾರೆ. ಟೋಕಿಯೋ ಒಲಿಂಪಿಕ್ಸ್ 2020ಗೆ ಆಯ್ಕೆಯಾದ ಭಾರತದ ಮೊದಲ ಸ್ವಿಮ್ಮರ್ ಎಂಬ ಹೆಗ್ಗಳಿಕೆಗೆ ಅವರು ಪಾತ್ರಾಗಿದ್ದಾರೆ. ಯೂನಿವರ್ಸಾಲಿಟಿ ಕೋಟಾದಲ್ಲಿ ಮಾನಾ ಪಟೇಲ್ ಈ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ.
ಈ ಮೂಲಕ 21ರ ಹರೆಯದ ಮಾನಾ ಪಟೇಲ್ ಸ್ಮಿಮ್ಮರ್ಗಳಾದ ಸಜನ್ ಪ್ರಕಾಶ್ ಹಾಗೂ ಶ್ರೀಹರಿ ನಟರಾಜನ್ ಅವರನ್ನು ಒಳಗೊಂಡ ಭಾರತದ ಸ್ವಿಮ್ಮಿಂಗ್ ಸ್ಕ್ವಾಡ್ಗೆ ಸೇರ್ಪಡೆಗೊಂಡಿದ್ದಾರೆ. ಈ ತಿಂಗಳ ಜುಲೈ 23ರಿಂದ ಆಗಸ್ಟ್ 8ರ ವರೆಗೆ ಜಪಾನ್ನ ರಾಜಧಾನಿ ಟೋಕಿಯೋದಲ್ಲಿ ಈ ಮಹತ್ವದ ಕ್ರೀಡಾಕೂಟ ನಡೆಯಲಿದೆ.

ಮಾನಾ ಮಟೇಲ್ 100 ಮೀಟರ್ ಬ್ಯಾಕ್ಸ್ಟ್ರೋಕ್ ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ. ಪುರುಷ ಸ್ಪರ್ಧಿಗಳಾದ ಸುಜನ್ ಪ್ರಕಾಶ್ ಹಾಗೂ ಶ್ರೀಹರಿ ನಟರಾಜ್ ಕ್ರಮವಾಗಿ 200 ಮೀಟರ್ ಬಟರ್ಫ್ಲೈ ಹಾಗೂ 100 ಮೀಟರ್ ಬ್ಯಾಕ್ಸ್ಟ್ರೋಕ್ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಈ ಇಬ್ಬರೂ ಕಳೆದ ತಿಂಗಳು ರೋಮ್ನಲ್ಲಿ ನಡೆದ ಸ್ಪರ್ಧೆಯಲ್ಲಿ ಒಲಿಂಪಿಕ್ಸ್ಗೆ ಅರ್ಹತೆಯನ್ನು ಗೊಟ್ಟಿಸಿಕೊಂಡಿದ್ದಾರೆ. "ಇದೊಂದು ಅದ್ಭುತವಾದ ಅನುಭವ. ಒಲಿಂಪಿಕ್ಸ್ ಬಗ್ಗೆ ನಾನು ನನ್ನ ಸಹ ಈಜುಗಾರರಿಂದ ಸಾಕಷ್ಟು ಕೇಳಿದ್ದೇನೆ ಹಾಗೂ ಟೆಲಿವಿಶನ್ನಲ್ಲಿ ಸಾಕಷ್ಟು ಬಾರಿ ನೋಡಿದ್ದೇನೆ. ಅದರ ಚಿತ್ರಗಳನ್ನು ಕೂಡ ತುಂಬಾ ಬಾರಿ ನೋಡಿದ್ದೇನೆ. ಆದರೆ ಈ ಬಾರಿ ನಾನು ಅದರಲ್ಲಿ ಭಾಗಿಯಾಗಲಿದ್ದು ವಿಶ್ವಶ್ರೇಷ್ಠ ಸ್ಪರ್ಧಿಗಳೊಂದಿಗೆ ಪೈಪೋಟಿಗೆ ಇಳಿಯುವುವುದು ನನಗೆ ರೋಮಾಂಚನವನ್ನುಂಟು ಮಾಡುತ್ತಿದೆ" ಎಮದು ಗುಜರಾತ್ ಮೂಲದ ಮಾನಾ ಪಟೇಲ್ ಒಲಿಂಪಿಕ್ಸ್.ಕಾಮ್ಗೆ ನೀಡಿದ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.
ಇನ್ನು ಮಾನಾ ಪಟೇಲ್ ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆದುಕೊಂಡಿರುವುದಕ್ಕೆ ಭಾರತದ ಕ್ರೀಡಾ ಸಚಿವ ಕಿರಣ್ ರಿಜಿಜು ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕ್ರೀಡಾ ಸಚಿವರು "ಬ್ಯಾಕ್ಸ್ಟ್ರೋಮ್ ಸ್ವಿಮ್ಮರ್ ಮಾನಾ ಪಟೇಲ್ ಭಾರತ ಪ್ರಥಮ ಮಹಿಳಾ ಹಾಗೂ ಮೂರನೇ ಸ್ವಿಮ್ಮರ್ ಆಗಿ ಟೋಕಿಯೋ ಒಲಿಂಪಿಕ್ಸ್ಗೆ ಆಯ್ಕೆಯಾಗಿದ್ದಾರೆ. ಅಭಿನಂದನೆಗಳು ಮಾನಾ. ಉತ್ತಮ ಸಾಧನೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.
(Kannada Copy of Mykhel Kannada)
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm