ಬ್ರೇಕಿಂಗ್ ನ್ಯೂಸ್
16-07-21 12:07 pm MYKHEL: Sadashiva ಕ್ರೀಡೆ
ನವದೆಹಲಿ: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಮ್ ಇಂಡಿಯಾದಲ್ಲಿ ಕೋವಿಡ್-19 ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಭಾರತ-ಇಂಗ್ಲೆಂಡ್ ಮಧ್ಯೆ ಐದು ಪಂದ್ಯಗಳ ಟೆಸ್ಟ್ ಸರಣಿ ಆರಂಭಕ್ಕೆ ಇನ್ನು ಎರಡು ವಾರಗಳು ಬಾಕಿಯಿರುವಾಗ ವಿರಾಟ್ ಕೊಹ್ಲಿ ಪಾಳಯದಲ್ಲಿ ಕೊರೊನಾ ಭೀತಿ ಶುರುವಾಗಿದೆ.
ಭಾರತ ತಂಡದಲ್ಲೀಗ ಕೋವಿಡ್ ಭೀತಿ ಶುರುವಾಗಿದೆಯಾದರೂ ಇಂಗ್ಲೆಂಡ್ಗೆ ಹೆಚ್ಚುವರಿ ಆಟಗಾರರನ್ನು ಕಳುಹಿಸಿಕೊಡುತ್ತಿಲ್ಲ ಎಂದು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಮೂಲ ತಿಳಿಸಿದೆ. ಭಾರತ ತಂಡದಲ್ಲಿ ಮೂವರಿಗೆ ಈಗಾಗಲೇ ಕೋವಿಡ್ ಪಾಸಿಟಿವ್ ಬಂದಿರುವುದು ಬಹಿರಂಗಗೊಂಡಿದೆ.
ಭಾರತೀಯ ತಂಡ ಈಗ ಡರ್ಹ್ಯಾಮ್ನಲ್ಲಿ ಬಯೋಬಬಲ್ ಪ್ರವೇಶಿಸಿದೆ. ಆದರೆ ತಂಡದ ಯುವ ಬ್ಯಾಟ್ಸ್ಮನ್ ಕಮ್ ವಿಕೆಟ್ ಕೀಪರ್ ರಿಷಭ್ ಪಂತ್, ಅನುಭವಿ ವೃದ್ಧಿಮಾನ್ ಸಾಹ ಮತ್ತು ಟ್ರೇನಿಂಗ್ ಸಿಬ್ಬಂದಿ ದಯಾನಂದ ಗರಣಿ ಲಂಡನ್ನಲ್ಲೇ ಉಳಿದು ಕ್ವಾರಂಟೈನ್ ಪಾಲಿಸುತ್ತಿದ್ದಾರೆ. ಇವರಲ್ಲಿ ಪಂತ್, ಗರಣಿಗೆ ಕೋವಿಡ್ ಪಾಸಿಟಿವ್ ಇದ್ದರೆ, ಸಾಹ ಮುನ್ನೆಚ್ಚರಿಕೆಯಾಗಿ ಐಸೊಲೇಶನ್ನಲ್ಲಿದ್ದಾರೆ.
ಆಟಗಾರರಲ್ಲಿ ಸಾಹ ಮತ್ತು ಪಂತ್ ಇಬ್ಬರೂ ಕ್ವಾರಂಟೈನ್ ಅವಧಿ ಮುಗಿಸುತ್ತ ಬಂದಿರುವುದರಿಂದ ಈಗಾಗಲೇ ಇಂಗ್ಲೆಂಡ್ನಲ್ಲಿರುವ ಭಾರತೀಯ ತಂಡಕ್ಕೆ ಹೆಚ್ಚುವರಿ ಆಟಗಾರರನ್ನು ಕಳುಹಿಸುತ್ತಿಲ್ಲ ಎಂದು ಬಿಸಿಸಿಐ ತಿಳಿಸಿದೆ. ಇಂಗ್ಲೆಂಡ್ನಲ್ಲೀಗ 20 ಆಟಗಾರರು 4 ಮೀಸಲು ಆಟಗಾರರು ಇದ್ದಾರೆ. ಆಗಸ್ಟ್ 4ರಿಂದ ಸೆಪ್ಟೆಂಬರ್ 14ರ ವರೆಗೆ ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ನಡೆಯಲಿದೆ.
(Kannada Copy of Mykhel Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm