ಬ್ರೇಕಿಂಗ್ ನ್ಯೂಸ್
20-07-21 11:23 am MYKHEL: Madhukara Shetty ಕ್ರೀಡೆ
ಟೋಕಿಯೋ, ಜುಲೈ20: ಒಲಿಂಪಿಕ್ಸ್ನಲ್ಲಿ ಪಾಲ್ಗೊಳ್ಳಲು ತೆರಳಿರುವ ಭಾರತೀಯ ಕ್ರೀಡಾಪಟುಗಳ ಮೊದಲ ತಂಡ ತನ್ನ ಅಭ್ಯಾಸವನ್ನು ಆರಂಭಿಸಿದೆ. ಭಾನುವಾರ ಟೋಕಿಯೋ ತಲುಪಿದ್ದ ಭಾರತೀಯ ಕ್ರೀಡಾಪಟುಗಳ ತಂಡ ಸೋಮವಾರ ಮೈದಾನಕ್ಕಿಳಿದು ಅಭ್ಯಾಸ ಪ್ರಾರಂಭ ಮಾಡಿದ್ದಾರೆ. ಭಾನುವಾರ ಭಾರತದ ಮೊದಲ ಬ್ಯಾಚ್ನ ಕ್ರೀಡಾಪಟುಗಳ ತಂಡ ಟೋಕಿಯೋ ತಲುಪಿತ್ತು. ಮುಂಜಾನೆ ಕೆಲ ಕೋವಿಡ್ ನಿಯಮಗಳನ್ನು ಪೂರೈಸಿದ ಬಳಿಕ ಒಲಿಂಪಿಕ್ಸ್ ಕ್ರೀಡಾಗ್ರಾಮವನ್ನು ಪ್ರವೇಶಿಸಿತ್ತು.
ಆರ್ಚರ್ಗಳಾದ ದೀಪಿಕಾ ಕುಮಾರಿ ಹಾಗೂ ಅತನು ದಾಸ್, ಟೇಬಲ್ ಟೆನ್ನಿಸ್ ಆಟಗಾರರಾದ ಜಿ ಸಥಿಯನ್ ಹಾಗೂ ಎ ಶರತ್ ಕಮಾಲ್, ಶಟ್ಲರ್ಗಳಾದ ಪಿವಿ ಸಿಂಧು ಮತ್ತು ಬಿ ಸಾಯಿ ಪ್ರಣೀತ್ ಹಾಗೂ ಜಿಮ್ನ್ಯಾಸ್ಟಿಕ್ ಪಟು ಪ್ರಣತಿ ನಾಯಕ್ ತಮ್ಮ ಅಭ್ಯಾಸವನ್ನು ಸೋಮವಾರ ಆರಂಭಿಸಿದ್ದಾರೆ.

ಆರ್ಚರಿ ಜೋಡಿಗಳಾದ ಅತನು ದಾಸ್ ಹಾಗೂ ದೀಪಿಕಾ ಕುಮಾರಿ ಸೋಮವಾರ ಮುಂಜಾನೆ ಯುಮೆನೋಶಿಮಾ ಪಾರ್ಕ್ನಲ್ಲಿ ತಮ್ಮ ಅಂತಿಮ ಹಂತದ ಅಭ್ಯಾಸವನ್ನು ಆರಂಭಿಸಿದರು. ಮೊದಲ ಒಲಿಂಪಿಕ್ಸ್ ಪದಕದ ಮೇಲೆ ಕಣ್ಣಿಟ್ಟಿರುವ ಟೇಬಲ್ ಟೆನ್ನಿಸ್ ಆಟಗಾರರಾದ ಸಥಿಯನ್ ಹಾಗೂ ಶರತ್ ಕಮಾಲ್ ಕೂಡ ತಮ್ಮ ಸಿದ್ಧತೆಯನ್ನು ನಡೆಸಿದ್ದಾರೆ. ಇನ್ನು ಕೋಚ್ ಲಕ್ಷ್ಮಣ್ ಮನೋಹರ್ ಶರ್ಮಾ ಅವರ ಉಪಸ್ಥಿತಿಯಲ್ಲಿ ಜಿಮ್ನ್ಯಾಸ್ಟಿಕ್ ಆಟಗಾರ್ತಿ ಪ್ರಣತಿ ನಾಯಕ್ ಕೂಡ ಸಿದ್ಧತೆ ಪ್ರಾರಂಭಿಸಿದ್ದಾರೆ. ಭಾರತೀಯ ಬ್ಯಾಡ್ಮಿಂಟನ್ನ ಸಿಂಗಲ್ಸ್ ತಂಡದ ಕೋಚ್ ಪಾರ್ಕ್ ತಯೀ ಸಾಂಗ್ ಅವರ ನೇತೃತ್ವದಲ್ಲಿ ಸಿಂಗಲ್ಸ್ ವಿಭಾಗದ ಆಟಗಾರರಾದ ಪಿವಿ ಸಿಂಧು ಹಾಗೂ ಪ್ರನೀತ್ ಅಭ್ಯಾಸವನ್ನು ನಡೆಸಿದರು. ಮತ್ತೊಂದೆಡೆ ಡಬಲ್ಸ್ ಜೋಡಿಯಾದ ಚಿರಾಗ್ ಶೆಟ್ಟಿ ಹಾಗೂ ಸಾತ್ವಿಕ್ಸಾಯಿರಾಜ್ ರಂಕಿರೆಡ್ಡಿಗೆ ಕೋಚ್ ಮಥಿಯಾಸ್ ಬೋಯಿ ಮಾರ್ಗದರ್ಶನ ನೀಡಿದರು.

ಈ ಮಧ್ಯೆ ಟೋಕಿಯೋ ಒಲಿಂಪಿಕ್ಸ್ಗೆ ಕೊರೊನಾವೈರಸ್ನ ಆತಂಕ ಹೆಚ್ಚಾಗುತ್ತಲೇ ಇದೆ. ಆಯೋಜಕ ಸಿಬ್ಬಂದಿಗಳ ಜೊತೆಗೆ ಈಗ ಒಲಿಂಪಿಕ್ಸ್ನಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳು ಕೂಡ ಕೊರೊನಾವೈರಸ್ಗೆ ತುತ್ತಾಗುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಅಮೇರಿಕಾದ ಯುವ ಟೆನ್ನಿಸ್ ಆಟಗಾರ್ತಿ ಕೋಕೋ ಗೌಫ್ ಕೊರೊನಾವೈರಸ್ಗೆ ತುತ್ತಾಗಿ ಟೂರ್ನಿಯಿಂದ ಅನಿವಾರ್ಯವಾಗಿ ಹೊರಗುಳಿಯುವ ಅನಿವಾರ್ಯತೆಗೆ ಒಳಗಾದ ನಂತರ ಅಮೆರಿಕಾದ ಮಹಿಳಾ ಜಿಮ್ನ್ಯಾಸ್ಟ್ ಕೂಡ ಕೊರೊನಾವೈರಸ್ಗೆ ತುತ್ತಾಗಿರುವುದು ಬೆಳಕಿಗೆ ಬಂದಿದೆ. ಇವರ ಜೊತೆಗೆ ಮತ್ತೋರ್ವ ಸದಸ್ಯರನ್ನು ಕೂಡ ಐಸೋಲೇಶನ್ಗೆ ಒಳಪಡಿಸಲಾಗಿದೆ.
(Kannada Copy of Mykhel Kannada)
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm