ಬ್ರೇಕಿಂಗ್ ನ್ಯೂಸ್
22-07-21 10:38 am MYKHEL: Sadashiva ಕ್ರೀಡೆ
ಟೋಕಿಯೋ, ಜುಲೈ 22: ಒಲಿಂಪಿಕ್ಸ್ ಆರಂಭಕ್ಕೆ ಇನ್ನು ಕೆಲವೇ ಗಂಟೆಗಳು ಮಾತ್ರವೇ ಬಾಕಿಯಿದೆ. ಈ ಸಂದರ್ಭದಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟ ಹಿಂದೆಂದೂ ಕಂಡಿರದ ಅತ್ಯಂತ ವಿಚಿತ್ರ ಸನ್ನಿವೇಶವನ್ನು ಕೊರೊನಾವೈರಸ್ನ ಕಾರಣದಿಂದಾಗಿ ಎದುರಿಸುತ್ತಿದೆ. ಸಾಕಷ್ಟು ಕಠಿಣ ನಿಯಮಗಳನ್ನು ಹೊಂದಿರುವ ಹೊರತಾಗಿಯೂ ಕೊರೊನಾವೈರಸ್ ಪ್ರಕರಣಗಳು ಕ್ರೀಡಾಗ್ರಾಮದಲ್ಲಿ ಪತ್ತೆಯಾಗುತ್ತಿದೆ.
ಗುರುವಾರ ಟೋಕಿಯೋ ಒಲಿಂಪಿಕ್ಸ್ ಆಯೋಜಕರು ಕೋವಿಡ್ ಹೊಸ ಪ್ರಕರಣಗಳ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಇದರಲ್ಲಿ ಒಲಿಂಪಿಕ್ಸ್ ಕ್ರೀಡಾಗ್ರಾಮದಲ್ಲಿ ಇಬ್ಬರು ಅಥ್ಲೀಟ್ಗಳಿಗೆ ಕೊರೊನಾವೈರಸ್ ಇರುವುದು ದೃಢಪಟ್ಟಿದೆ. 11 ಹೊಸ ಪ್ರಕರಣಗಳು ಕ್ರೀಡಾಗ್ರಾಮದಲ್ಲಿ ಪತ್ತೆಯಾಗಿದ್ದು ಇದರಲ್ಲಿ ಇಬ್ಬರು ಅಥ್ಲೀಟ್ಗಳಾಗಿದ್ದಾರೆ. ಈ ಮೂಲಕ ಈವರೆಗೆ ಒಟ್ಟು 86 ಕೊರೊನಾವೈರಸ್ ಪ್ರಕರಣಗಳು ಒಲಿಂಪಿಕ್ಸ್ಗೆ ಸಂಬಂಧಿಸಿದ ಕ್ರೀಡಾಪಟುಗಳು ಹಾಗೂ ಇತರ ಸಿಬ್ಬಂದಿಗಳಿಗೆ ಕಾಣಿಸಿಕೊಂಡಿದೆ.

ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳು ಕೊರೊನಾವೈರಸ್ಗೆ ತುತ್ತಾದಂತಾ ಸಂದರ್ಭದಲ್ಲಿ ಪಂದ್ಯಗಳನ್ನು ಮುಂದುವರಿಸಲು ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ವಿಚಾರವಾಗಿ ಈಗಾಗಲೇ ಮಾರ್ಗಸೂಚಿಯನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಹೀಗಾಗಿ ಒಲಿಂಪಿಕ್ಸ್ ಸುಸೂತ್ರವಾಗಿ ನೆರವೇರಲು ಯಾವುದೇ ಅಡ್ಡಿಯಾಗಲಾರದು ಎಂಬ ವಿಶ್ವಾಸ ಒಲಿಂಪಿಕ್ಸ್ ಆಯೋಜಕರಲ್ಲಿದೆ.
ಇನ್ನು ಭಾರತೀಯ ಕ್ರೀಡಾಪಟುಗಳ ಮೊದಲ ತಂಡ ಈಗಾಗಲೇ ಟೋಕಿಯೋದ ಕ್ರೀಡಾಗ್ರಾಮದಲ್ಲಿ ಮೂರು ಮಹಡಿಯ ಕಟ್ಟಡದಲ್ಲಿ ವಾಸ್ತವ್ಯದಲ್ಲಿದ್ದಾರೆ. ಕೊರೊನಾವೈರಸ್ನ ಭೀತಿಯ ಹಿನ್ನೆಲೆಯಲ್ಲಿ ಭಾರತೀಯ ಕ್ರೀಡಾಪಟುಗಳು ಸಾಕಷ್ಟು ಎಚ್ಚರಿಕೆಯನ್ನು ವಹಿಸುತ್ತಿದ್ದು ಅಭ್ಯಾಸಕ್ಕೆ ನಿಗದಿಪಡಿಸಿರುವ ಸ್ಥಳವನ್ನು ಹೊರತುಪಡಿಸಿ ಬೇರೆಲ್ಲೂ ತೆರಳದಂತೆ ತಮಗೆ ತಾವೇ ನಿರ್ಬಂಧಿಸಿಕೊಂಡಿದ್ದಾರೆ. ಕ್ರೀಡಾಗ್ರಾಮದ ಒಳಗೆ ಕ್ರೀಡಾಪಟುಗಳ ಓಡಾಟಕ್ಕೆ ಯಾವುದೇ ನಿರ್ಬಂಧಗಳು ಇಲ್ಲದ ಕಾರಣ ಭಾರತೀಯ ಕ್ರೀಡಾಪಟುಗಳು ಈ ಮುನ್ನೆಚ್ಚರಿಕೆಯನ್ನು ವಹಿಸಿಕೊಂಡಿದ್ದಾರೆ.
(Kannada Copy of Mykhel Kannada)
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm