ಬ್ರೇಕಿಂಗ್ ನ್ಯೂಸ್
05-08-21 12:53 pm Mykhel: Sadashiva ಕ್ರೀಡೆ
ನವದೆಹಲಿ: ಪ್ರತಿಷ್ಠಿತ ಟೋಕಿಯೋ ಒಲಿಂಪಿಕ್ಸ್ ವೇಳೆ ರಾಷ್ಟ್ರೀಯ ಕೋಚ್ ಸೌಮ್ಯದೀಪ್ ರಾಯ್ ಸಹಾಯ ನಿರಾಕರಿಸಿದ ಭಾರತದ ಸ್ಟಾರ್ ಟೇಬಲ್ ಟೆನಿಸ್ ಆಟಗಾರ್ತಿ ಮಣಿಕಾ ಬಾತ್ರಾಗೆ ಟೇಬಲ್ ಟೆನಿಸ್ ಫೆಡರೇಶನ್ ಆಫ್ ಇಂಡಿಯಾ (ಟಿಟಿಎಫ್ಐ) ಬುಧವಾರ (ಆಗಸ್ಟ್ 4) ಶೋಕಾಸ್ ನೋಟಿಸ್ ನೀಡಲು ನಿರ್ಧರಿಸಿದೆ.
ಮಣಿಕಾ ಬಾತ್ರಾ ಅವರ ವೈಯಕ್ತಿಕ ಕೋಚ್ ಸನ್ಮಯ್ ಪರಂಜ್ಪೆ ಅವರಿಗೆ ಟೋಕಿಯೋ ಒಲಿಂಪಿಕ್ಸ್ನಲ್ಲಿ ಅಭ್ಯಾಸದ ವೇಳೆ ಪ್ರವೇಶಕ್ಕೆ ಅವಕಾಶ ನೀಡಲಾಗಿತ್ತು. ಆದರೆ ಪಂದ್ಯದ ವೇಳೆ ಕ್ರೀಡಾಂಗಣ ಪ್ರವೇಶಕ್ಕೆ ನಿರಾಕರಿಸಲಾಗಿತ್ತು. ಸ್ಪರ್ಧೆಯ ವೇಳೆ ಪರಂಜ್ಪೆಗೆ ಅವಕಾಶ ನೀಡಬೇಕೆಂದು ಮಣಿಕಾ ಒತ್ತಾಯಿಸಿದರಾದರೂ ಆಯೋಜಕರು ಇದಕ್ಕೆ ಸಮ್ಮತಿಸಲಿಲ್ಲ.

ಯಾಕೆಂದರೆ ಒಲಿಂಪಿಕ್ಸ್ನಂತ ದೊಡ್ಡ ಕ್ರೀಡಾಕೂಟಗಳ ವೇಳೆ ರಾಷ್ಟ್ರೀಯ ಕೋಚ್ಗೆ ಸ್ಪರ್ಧೆ ನಡೆಯುತ್ತಿರುವ ವೇಳೆ ಪ್ಲೇಯರ್ಗೆ ಸಲಹೆ, ಮಾರ್ಗದರ್ಶನ ನೀಡಲು ಅವಕಾಶವಿದೆಯೇ ಹೊರತು ವೈಯಕ್ತಿಕ ಕೋಚ್ಗಳ ಸಹಾಯ ಪಡೆದುಕೊಳ್ಳಲು ಪ್ಲೇಯರ್ಗೆ ಅವಕಾಶವಿಲ್ಲ. ಸ್ಪರ್ಧೆ ನಡೆಯುವಾಗ ವೈಯಕ್ತಿಕ ಕೋಚ್ ಪ್ರವೇಶಕ್ಕೆ ಹೆಚ್ಚಿನಸಾರಿ ಅವಕಾಶ ಮಾಡಿಕೊಡಲ್ಲ. ಇದರಿಂದ ಬೇಸರಗೊಂಡ ಮಣಿಕಾ ಪ್ರತಿಭಟನಾರ್ಧವಾಗಿ ಸ್ಪರ್ಧೆಯ ವೇಳೆ ರಾಷ್ಟ್ರೀಯ ಕೋಚ್ ಸೌಮ್ಯದೀಪ್ ರಾಯ್ ಸಹಾಯ ನಿರಾಕರಿಸಿದ್ದರು. ಪರಿಣಾಮ, ಮಹಿಳಾ ಸಿಂಗಲ್ಸ್ 32ನೇ ಸುತ್ತಿಗೆ ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದ ಮಣಿಕಾ, ಆ ಬಳಿಕ ಸೋತು ಟೂರ್ನಿಯಿಂದ ನಿರ್ಗಮಿಸಿದ್ದರು. ತಂಡ ಸ್ಪರ್ಧೆಯಲ್ಲೂ ಮಣಿಕಾಗೆ ಪದಕ ಸಿಕ್ಕಿರಲಿಲ್ಲ.
(Kannada Copy of Mykhel Kannada)
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm