ಬ್ರೇಕಿಂಗ್ ನ್ಯೂಸ್
05-08-21 12:53 pm Mykhel: Sadashiva ಕ್ರೀಡೆ
ನವದೆಹಲಿ: ಪ್ರತಿಷ್ಠಿತ ಟೋಕಿಯೋ ಒಲಿಂಪಿಕ್ಸ್ ವೇಳೆ ರಾಷ್ಟ್ರೀಯ ಕೋಚ್ ಸೌಮ್ಯದೀಪ್ ರಾಯ್ ಸಹಾಯ ನಿರಾಕರಿಸಿದ ಭಾರತದ ಸ್ಟಾರ್ ಟೇಬಲ್ ಟೆನಿಸ್ ಆಟಗಾರ್ತಿ ಮಣಿಕಾ ಬಾತ್ರಾಗೆ ಟೇಬಲ್ ಟೆನಿಸ್ ಫೆಡರೇಶನ್ ಆಫ್ ಇಂಡಿಯಾ (ಟಿಟಿಎಫ್ಐ) ಬುಧವಾರ (ಆಗಸ್ಟ್ 4) ಶೋಕಾಸ್ ನೋಟಿಸ್ ನೀಡಲು ನಿರ್ಧರಿಸಿದೆ.
ಮಣಿಕಾ ಬಾತ್ರಾ ಅವರ ವೈಯಕ್ತಿಕ ಕೋಚ್ ಸನ್ಮಯ್ ಪರಂಜ್ಪೆ ಅವರಿಗೆ ಟೋಕಿಯೋ ಒಲಿಂಪಿಕ್ಸ್ನಲ್ಲಿ ಅಭ್ಯಾಸದ ವೇಳೆ ಪ್ರವೇಶಕ್ಕೆ ಅವಕಾಶ ನೀಡಲಾಗಿತ್ತು. ಆದರೆ ಪಂದ್ಯದ ವೇಳೆ ಕ್ರೀಡಾಂಗಣ ಪ್ರವೇಶಕ್ಕೆ ನಿರಾಕರಿಸಲಾಗಿತ್ತು. ಸ್ಪರ್ಧೆಯ ವೇಳೆ ಪರಂಜ್ಪೆಗೆ ಅವಕಾಶ ನೀಡಬೇಕೆಂದು ಮಣಿಕಾ ಒತ್ತಾಯಿಸಿದರಾದರೂ ಆಯೋಜಕರು ಇದಕ್ಕೆ ಸಮ್ಮತಿಸಲಿಲ್ಲ.
ಯಾಕೆಂದರೆ ಒಲಿಂಪಿಕ್ಸ್ನಂತ ದೊಡ್ಡ ಕ್ರೀಡಾಕೂಟಗಳ ವೇಳೆ ರಾಷ್ಟ್ರೀಯ ಕೋಚ್ಗೆ ಸ್ಪರ್ಧೆ ನಡೆಯುತ್ತಿರುವ ವೇಳೆ ಪ್ಲೇಯರ್ಗೆ ಸಲಹೆ, ಮಾರ್ಗದರ್ಶನ ನೀಡಲು ಅವಕಾಶವಿದೆಯೇ ಹೊರತು ವೈಯಕ್ತಿಕ ಕೋಚ್ಗಳ ಸಹಾಯ ಪಡೆದುಕೊಳ್ಳಲು ಪ್ಲೇಯರ್ಗೆ ಅವಕಾಶವಿಲ್ಲ. ಸ್ಪರ್ಧೆ ನಡೆಯುವಾಗ ವೈಯಕ್ತಿಕ ಕೋಚ್ ಪ್ರವೇಶಕ್ಕೆ ಹೆಚ್ಚಿನಸಾರಿ ಅವಕಾಶ ಮಾಡಿಕೊಡಲ್ಲ. ಇದರಿಂದ ಬೇಸರಗೊಂಡ ಮಣಿಕಾ ಪ್ರತಿಭಟನಾರ್ಧವಾಗಿ ಸ್ಪರ್ಧೆಯ ವೇಳೆ ರಾಷ್ಟ್ರೀಯ ಕೋಚ್ ಸೌಮ್ಯದೀಪ್ ರಾಯ್ ಸಹಾಯ ನಿರಾಕರಿಸಿದ್ದರು. ಪರಿಣಾಮ, ಮಹಿಳಾ ಸಿಂಗಲ್ಸ್ 32ನೇ ಸುತ್ತಿಗೆ ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದ ಮಣಿಕಾ, ಆ ಬಳಿಕ ಸೋತು ಟೂರ್ನಿಯಿಂದ ನಿರ್ಗಮಿಸಿದ್ದರು. ತಂಡ ಸ್ಪರ್ಧೆಯಲ್ಲೂ ಮಣಿಕಾಗೆ ಪದಕ ಸಿಕ್ಕಿರಲಿಲ್ಲ.
(Kannada Copy of Mykhel Kannada)
16-10-25 09:04 pm
Bangalore Correspondent
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
16-10-25 10:52 pm
HK News Desk
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
16-10-25 10:37 pm
Mangalore Correspondent
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm