ಬ್ರೇಕಿಂಗ್ ನ್ಯೂಸ್
05-08-21 05:25 pm Mykhel: Madhu ಕ್ರೀಡೆ
ಟೋಕಿಯೋ, ಆಗಸ್ಟ್ 5: 57 ಕೆಜಿ ವಿಭಾಗದ ರೆಸ್ಲಿಂಗ್ ಫೈನಲ್ ಸ್ಪರ್ಧೆಯಲ್ಲಿ ಭಾರತದ ರವಿಕುಮಾರ್ ದಾಹಿಯಾ ಸೋಲು ಕಂಡಿದ್ದಾರೆ. ಹೀಗಾಗಿ ಚಿನ್ನದ ಪದಕ ಗೆಲ್ಲುವ ಪ್ರಯತ್ನದಲ್ಲಿ ಭಾರತ ವಿಫಲವಾಗಿದೆ. ಆದರೆ ಈ ಬಾರಿಯ ಒಲಿಂಪಿಕ್ಸ್ನಲ್ಲಿ ಎರಡನೇ ಬೆಳ್ಳಿಯ ಪದಕ ಗೆಲ್ಲುವಲ್ಲಿ ಭಾರತ ಯಶಸ್ವಿಯಾಗಿದೆ.
ರಷ್ಯಾ ಒಲಿಂಪಿಕ್ಸ್ ಕಮಿಟಿಯ ಜೌರ್ ಉಗುವ್ ವಿರುದ್ಧದ ಫೈನಲ್ನಲ್ಲಿ ರವಿ ಕುಮಾರ್ ದಾಹಿಯಾ ಹಿನ್ನಡೆಯನ್ನು ಅನುಭವಿಸಿದರು. ಮೊದಲ ಹಂತದಲ್ಲಿ 2-4 ಅಂತರದಿಂದ ಹಿನ್ನೆಡೆಯಲ್ಲಿದ್ದ ರವಿ ಕುಮಾರ್ ಬಳಿಕ 4-7 ಅಂತರದಿಂದ ಸೋಲು ಕಂಡರು. ಈ ಮೂಲಕ ರವಿ ಕುಮಾರ್ ಚಿನ್ನದ ಪದಕವನ್ನು ಗೆಲ್ಲುವಲ್ಲಿ ವಿಫಲವಾದರು. ಆದರೆ ಟೋಕಿಯೋ ಒಲಿಂಪಿಕಲ್ಸ್ನಲ್ಲಿ ಭಾರತಕ್ಕೆ ಎರಡನೇ ಬೆಳ್ಳಿ ಪದಕವನ್ನು ಗೆಲ್ಲಿಸಿಕೊಟ್ಟಿದ್ದಾರೆ. ಇದಕ್ಕೂ ಮುನ್ನ ಭಾರತದ ವೈಟ್ಲಿಫ್ಟರ್ ಮೀರಾಬಾಯಿ ಚಾನು ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.

ಈ ಸಾಧನೆಯೊಂದಿಗೆ ರವಿ ಕುಮಾರ್ ದಾಹಿಯ ಒಲಿಂಪಿಕ್ಸ್ನಲ್ಲಿ ರೆಸ್ಲಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಎರಡನೇ ಕ್ರೀಡಾಪಟು ಎನಿಸಿದ್ದಾರೆ. ಇದಕ್ಕೂ ಮುನ್ನ 2012ರ ಲಂಡನ್ ಒಲಿಂಪಿಕ್ಸ್ನ ರಸ್ಲಿಂಗ್ನಲ್ಲಿ ಸುಶೀಲ್ ಕುಮಾರ್ ಬೆಳ್ಳಿ ಪದಕ ಗೆದ್ದಿದ್ದರು. ಅದಾದ ಬಳಿಕ ಇದೇ ಮೊದಲ ಬಾರಿಗೆ ಪುರುಷರ ರಸ್ಲಿಂಗ್ನಲ್ಲಿ ಭಾರತ ಪದಕ ಗೆದ್ದುಕೊಂಡಿದೆ. ಫೈನಲ್ ಸ್ಪರ್ಧೆಯಲ್ಲಿ ಮೊದಲ ಹಂತದಲ್ಲಿ ರಷ್ಯಾ ಒಲಿಂಪಿಕ್ಸ್ ಕಮಿಟಿಯ ಜೌರ್ ಉಗುವ್ ವಿರುದ್ಧ 2-4 ಅಂತರದಿಂದ ಹಿನ್ನೆಡೆ ಅನುಭವಿಸಿದ್ದರು. ರಷ್ಯಾ ಒಲಿಂಪಿಕ್ಸ್ ಕಮಿಟಿಯ ಜೌರ್ ಉಗುವ್ ತಮಗಿದ್ದ ಮುನ್ನಡೆಯನ್ನು ಅಂತ್ಯದವರೆಗೂ ಕಾಯ್ದುಕೊಂಡಿದ್ದಲ್ಲದೆ ಹೆಚ್ಚು ಅಂಕವನ್ನು ಗಳಿಸಲು ಯಶಸ್ವಿಯಾದರು. ಈ ಮೂಲಕ ಭಾರತದ ಸ್ಪರ್ಧಿ ಅಂತಿಮ ಘಟ್ಟದಲ್ಲಿ ಸೋಲು ಕಾಣುವಂತಾಯಿತು.
(Kannada Copy of Mykhel Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm