ಬ್ರೇಕಿಂಗ್ ನ್ಯೂಸ್
17-08-21 01:25 pm Headline Karnataka News Network ಕ್ರೀಡೆ
ನವದೆಹಲಿ, ಆಗಸ್ಟ್ 17: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಪಂದ್ಯಗಳ ದಿನಾಂಕ ಘೋಷಣೆಯಾಗಿದ್ದು, ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಅಕ್ಟೋಬರ್ 24 ರಂದು ದುಬೈನಲ್ಲಿ ಗುಂಪು ಹಂತದಲ್ಲಿ ಮುಖಾಮುಖಿಯಾಗಲಿವೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ತಿಳಿಸಿದೆ.
ಯುಎಇ ಮತ್ತು ಒಮಾನ್ನಲ್ಲಿ ಐಸಿಸಿ ಪುರುಷರ ಟಿ20 ವಿಶ್ವಕಪ್ 2021 ಅಕ್ಟೋಬರ್ 17ರಿಂದ ಆರಂಭವಾಗಲಿದ್ದು, ಅಂತಿಮ ಪಂದ್ಯ ನವೆಂಬರ್ 14 ರಂದು ದುಬೈನಲ್ಲಿ ನಡೆಯಲಿದೆ.
ಪಂದ್ಯಾವಳಿಯು ಅಕ್ಟೋಬರ್ 17 ರಂದು ಓಮನ್ ಮತ್ತು ಪಪುವಾ ನ್ಯೂಗಿನಿಯ ನಡುವಿನ ರೌಂಡ್ 1 ಗ್ರೂಪ್ ಬಿ ಮುಖಾಮುಖಿಯೊಂದಿಗೆ ಆರಂಭವಾಗಲಿದೆ. ಸ್ಕಾಟ್ಲೆಂಡ್ ಮತ್ತು ಬಾಂಗ್ಲಾದೇಶ, ಬಿ ಗುಂಪಿನ ಇತರ ತಂಡಗಳು ಅಂದು ಸಂಜೆಯ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.

ಐರ್ಲೆಂಡ್, ನೆದರ್ಲ್ಯಾಂಡ್, ಶ್ರೀಲಂಕಾ ಮತ್ತು ನಮೀಬಿಯಾ ಎ ಗುಂಪಿನಲ್ಲಿ ಅಕ್ಟೋಬರ್ 18 ರಿಂದ ಅಬುಧಾಬಿಯಲ್ಲಿ ಸೆಣಸಾಡಲಿವೆ. ರೌಂಡ್ 1ರ ಪಂದ್ಯಗಳು ಅಕ್ಟೋಬರ್ 22 ರವರೆಗೆ ನಡೆಯುತ್ತವೆ. ಪ್ರತಿ ಗುಂಪಿನಲ್ಲಿ ಅಗ್ರ ಎರಡು ತಂಡಗಳು ಸೂಪರ್ 12 ಹಂತಕ್ಕೆ ಬರಲಿವೆ. ಈ ಪಂದ್ಯಗಳು ಅಕ್ಟೋಬರ್ 23 ರಿಂದ ಆರಂಭವಾಗುತ್ತದೆ.
ಪಂದ್ಯಗಳ ಎರಡನೇ ಸುತ್ತು, ಸೂಪರ್ 12 ಹಂತ ಅಕ್ಟೋಬರ್ 23 ರಂದು ಅಬುಧಾಬಿಯಲ್ಲಿ ನಡೆಯಲಿದ್ದು, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಗುಂಪು 1 ಸ್ಪರ್ಧೆ ನಡೆಯಲಿದೆ. ಇದರ ನಂತರ ದುಬೈನಲ್ಲಿ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವೆ ಅಂದು ಸಂಜೆ ಪೈಪೋಟಿ ನಡೆಸಲಿವೆ.
India will open their campaign against arch-rivals Pakistan in the Super 12 stage of the T20 World Cup in Dubai on October 24, the ICC said on Tuesday.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm