ಬ್ರೇಕಿಂಗ್ ನ್ಯೂಸ್
01-08-20 02:07 pm Headline Karnataka News Network ಕ್ರೀಡೆ
ಹೊಸದಿಲ್ಲಿ: ದಾಖಲೆಗಳಿಗೆ ಪರ್ಯಾಯ ಹೆಸರೇ ಸಚಿನ್ ತೆಂಡುಲ್ಕರ್. ಆದರೆ ಅವರಿಗೆ ಒಲಿಯದ ದಾಖಲೆಗಳೂ ಸಾಕಷ್ಟಿವೆ. ಇದರಲ್ಲಿ ಪ್ರಮುಖವಾದುದೆಂದರೆ, ಟೆಸ್ಟ್ ಕ್ರಿಕೆಟ್ನಲ್ಲಿ ಶತಕ ಬಾರಿಸಿದ ಅತೀ ಕಿರಿಯ ಆಟಗಾರನೆಂಬ ದಾಖಲೆ ಸ್ವಲ್ಪದರಲ್ಲೇ ಕೈತಪ್ಪಿದ್ದು. ಇದಕ್ಕೆ ತಾನೇ ಕಾರಣ ಎಂದು ನ್ಯೂಜಿಲ್ಯಾಂಡಿನ ಮಾಜಿ ವೇಗಿ ಡ್ಯಾನಿ ಮಾರಿಸನ್ ಬಹಳ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ!
ನಾಯಕ ನೀಡಿದ ಎಚ್ಚರಿಕೆ
‘ಆಗಷ್ಟೇ ಪಾಕಿಸ್ಥಾನ ಪ್ರವಾಸ ಮುಗಿಸಿದ ತೆಂಡುಲ್ಕರ್ ನ್ಯೂಜಿಲ್ಯಾಂಡಿಗೆ ಆಗಮಿಸಿದ್ದರು. ಈ ಹುಡುಗನ ಬಗ್ಗೆ ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಅಭ್ಯಾಸ ತಂಡದ ನಾಯಕ ಕೆನ್ ರುದರ್ಫೋರ್ಡ್ ಎಚ್ಚರಿಸಿದ್ದರು.
ನನಗೂ 16ರ ಹರೆಯದ ಸಚಿನ್ ಬಗ್ಗೆ ಕುತೂಹಲ ಮೂಡಿತ್ತು. ಆವರು ರಿಚರ್ಡ್ ಹ್ಯಾಡ್ಲಿ ಎಸೆತಗಳನ್ನೂ ದಿಟ್ಟ ರೀತಿಯಲ್ಲಿ ನಿಭಾಯಿಸುತ್ತಿದ್ದರು…’ ಎಂದು ಮಾರಿಸನ್ 1990ರ ಘಟನೆಯನ್ನು ಮೆಲುಕು ಹಾಕಿದ್ದಾರೆ.
29 ವರ್ಷಗಳ ದಾಖಲೆ
ಪ್ರಥಮ ಪಂದ್ಯದಲ್ಲಿ ಸೊನ್ನೆ ಮತ್ತು 24 ರನ್ ಮಾಡಿದ ಸಚಿನ್, ನೇಪಿಯರ್ನ ದ್ವಿತೀಯ ಟೆಸ್ಟ್ನಲ್ಲಿ ಶತಕದತ್ತ ದೌಡಾಯಿಸಿದ್ದರು. ಇದನ್ನು ಸಾಧಿಸಿದ್ದೇ ಆದಲ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ ಶತಕ ಬಾರಿಸಿದ ವಿಶ್ವದ ಅತೀ ಕಿರಿಯ ಆಟಗಾರನೆಂಬ ವಿಶ್ವ ದಾಖಲೆ ನಿರ್ಮಾಣಗೊಳ್ಳುತ್ತಿತ್ತು. 1961ರಷ್ಟು ಹಿಂದೆ ಪಾಕಿಸ್ಥಾನದ ಮುಷ್ತಾಕ್ ಮೊಹಮ್ಮದ್ 17 ವರ್ಷ, 78ನೇ ದಿನದಲ್ಲಿ ಬಾರಿಸಿದ ಶತಕದ ದಾಖಲೆ ಪತನಗೊಳ್ಳುತ್ತಿತ್ತು.
88ಕ್ಕೆ ಕೊನೆಗೊಂಡ ಆಟ
’88 ರನ್ ಮಾಡಿ ಆಡುತ್ತಿದ್ದ ತೆಂಡುಲ್ಕರ್ಗೆ ನಾನು ಬೌಲಿಂಗ್ ಮಾಡಲಿಳಿದಿದ್ದೆ. ನನಗೆ 3 ಬೌಂಡರಿಗಳ ರುಚಿ ತೋರಿಸಿ ಶತಕ ಪೂರ್ತಿ ಮಾಡುತ್ತಾರೇನೋ ಎಂಬ ಆತಂಕ ಮನೆಮಾಡಿತ್ತು. ಆದರೆ ಅದೇ ಮೊತ್ತಕ್ಕೆ ನಾನು ಅವರ ವಿಕೆಟ್ ಹಾರಿಸಿದೆ. ಮಿಡ್ ಆಫ್ನಲ್ಲಿದ್ದ ಜಾನ್ ರೈಟ್ ಕ್ಯಾಚ್ ಪಡೆದಿದ್ದರು. ನಾನೊಂದು ದೊಡ್ಡ ಸಾಹಸ ಮಾಡಿದ್ದೆ’ ಎಂದು ಮಾರಿಸನ್ ಖುಷಿಯಿಂದ ಹೇಳಿದರು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm