ಬ್ರೇಕಿಂಗ್ ನ್ಯೂಸ್
19-09-21 11:54 am Mykhel: Sadashiva ಕ್ರೀಡೆ
ಅಬುಧಾಬಿ, ಸೆ.19 : ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ದ್ವಿತೀಯ ಹಂತದ ಪಂದ್ಯಗಳು ಸೆಪ್ಟೆಂಬರ್ 19ರಿಂದ ಶುರುವಾಗಲಿದೆ. ಸನ್ ರೈಸರ್ಸ್ ಹೈದರಾಬಾದ್ (ಎಸ್ಆರ್ಎಚ್) ತಂಡ ಈ ಹಂತದಲ್ಲಿ ಹೇಗೆ ಕಮ್ಬ್ಯಾಕ್ ಮಾಡಲಿದೆ ಅನ್ನೋದರ ಮೇಲೆ ತಂಡದ ಪ್ರಶಸ್ತಿ ಆಸೆ ಅವಲಂಬಿತವಾಗಿದೆ ಎಂದು ಭಾರತದ ಮಾಜಿ ಬ್ಯಾಟ್ಸ್ಮನ್, ಹೈದರಾಬಾದ್ ಮೆಂಟರ್ ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.
ಟಿ20 ಕ್ರಿಕೆಟ್ ಮಾದರಿಗಳಲ್ಲಿ ಬಹಳಷ್ಟು ಬದಲಾವಣೆಗೆ ಅವಕಾಶವಿರುತ್ತದೆ. ಅಂದರೆ ದುರ್ಬಲ ತಂಡವೊಂದು ಅಚಾನಕ್ ಬಲಿಷ್ಠ ತಂಡವಾಗಿ ಬದಲಾಗಬಹುದು. ಮುಖ್ಯವಾಗಿ ಇಂಥ ಟೂರ್ನಿಗಳ ವೇಳೆ ದುರ್ಬಲ ತಂಡವೊಂದು ಬಲಿಷ್ಠ ತಂಡವಾಗಿ ಅಥವಾ ಬಲಿಷ್ಠ ತಂಡವೊಂದು ದುರ್ಬಲ ತಂಡವಾಗಿ ಬದಲಾಗಲು ಅವಕಾಶಗಳಿರುತ್ತವೆ ಎಂದು ವಿವಿಎಸ್ ಲಕ್ಷ್ಮಣ್ ತಿಳಿಸಿದ್ದಾರೆ.
"ಅಂಕಪಟ್ಟಿಯಲ್ಲಿ ಕೆಳ ಸ್ಥಾನದಲ್ಲಿರುವ ನಮ್ಮಂಥ (ಸನ್ ರೈಸರ್ಸ್ ಹೈದರಾಬಾದ್) ತಂಡಗಳಿಗೆ ಐಪಿಎಲ್ ಆರಂಭಿಕ ಹಂತ ಮತ್ತು ಎರಡನೇ ಹಂತದ ನಡುವಿನ ಈ ಬಿಡುವು ಒಗ್ಗಟ್ಟಾಗಿ ಮತ್ತು ಮಾನಸಿಕವಾಗಿ ಬಲಶಾಲಿಯಾಗಿ ಮರಳಲು ಅವಕಾಶ ನೀಡಿದೆ. ನಮಗೆ ಮಾನಸಿಕ ಸ್ಥೈರ್ಯ ಲಭಿಸಿದೆ. ನಮ್ಮ ಗುರಿ ಹೊಸತನದಿಂದ ಕೂಡಿದೆ," ಎಂದು ಲಕ್ಷ್ಮಣ್ ಅಭಿಪ್ರಾಯಿಸಿದ್ದಾರೆ.
ಕಳೆದ ಮೇ ತಿಂಗಳಲ್ಲಿ ಭಾರತದಲ್ಲಿ ಅರ್ಧಕ್ಕೆ ನಿಲುಗಡೆಯಾಗಿದ್ದ ಐಪಿಎಲ್ 2021ರ ಆವೃತ್ತಿ ಸೆಪ್ಟೆಂಬರ್ 19ರಿಂದ ಅಕ್ಟೋಬರ್ 15ರ ವರೆಗೆ ಯುಎಇಯಲ್ಲಿ ನಡೆಯಲಿದೆ. ಸೆಪ್ಟೆಂಬರ್ 22ರಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಹೈದರಾಬಾದ್ ಮಧ್ಯೆ ಪಂದ್ಯ ನಡೆಯಲಿದೆ. ಹೈದರಾಬಾದ್ ಈಗ ಅಂಕಪಟ್ಟಿಯಲ್ಲಿ ಕೊನೇ ಸ್ಥಾನದಲ್ಲಿದೆ. ಆಡಿರುವ ಏಳು ಪಂದ್ಯಗಳಲ್ಲಿ ಎಸ್ಆರ್ಎಚ್ ಒಂದೇ ಪಂದ್ಯ ಗೆದ್ದಿದೆ.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm