ಬ್ರೇಕಿಂಗ್ ನ್ಯೂಸ್
19-12-21 10:09 pm HK Desk news ಕ್ರೀಡೆ
ತಿರುವನಂತಪುರಂ, ಡಿ. 19: 'ಪಯ್ಯೋಲಿ ಎಕ್ಸ್ಪ್ರೆಸ್' ಖ್ಯಾತಿಯ ಭಾರತದ ಮಾಜಿ ಅಥ್ಲೀಟ್ ಹಾಗೂ ಒಲಿಂಪಿಯನ್ ಪಿ.ಟಿ. ಉಷಾ ವಿರುದ್ಧ ಕೇರಳ ಪೊಲೀಸರು ವಂಚನೆ ಪ್ರಕರಣ ದಾಖಲಿಸಿದ್ದಾರೆ. ಕೇರಳದ ಕೋಯಿಕ್ಕೋಡ್ ಪೊಲೀಸರು ಭಾರತದ 'ಚಿನ್ನದ ಹುಡುಗಿ' ಪಿ.ಟಿ ಉಷಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಾಜಿ ಅಥ್ಲೀಟ್ ಜೆಮ್ಮಾ ಜೋಸೆಫ್ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ ಉಷಾ ಮತ್ತು ಇತರ ಆರು ಮಂದಿ ಐಪಿಸಿ 420 (ವಂಚನೆ ಮತ್ತು ಅಪ್ರಾಮಾಣಿಕತೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಐಎಎನ್ಎಸ್ನೊಂದಿಗೆ ಮಾತನಾಡಿದ ಪೊಲೀಸ್ ಅಧಿಕಾರಿಯೊಬ್ಬರು ಪ್ರಕರಣ ದಾಖಲಾಗಿರುವುದನ್ನು ಖಚಿತಪಡಿಸಿದ್ದಾರೆ.
"ಕೋಯಿಕ್ಕೋಡ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಜೋಸೆಫ್ ಅವರು ನೀಡಿದ ದೂರಿನ ಆಧಾರದ ಮೇಲೆ ಕ್ರಮ ಜರುಗಿಸಲಾಗಿದೆ. ಶುಕ್ರವಾರ ಪ್ರಕರಣ ದಾಖಲಾಗಿದ್ದು, ಶೀಘ್ರವೇ ತನಿಖೆ ಆರಂಭವಾಗಲಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಹೊಸ ಅಪಾರ್ಟ್ಮೆಂಟ್ ಹೊಂದುವ ನಿರೀಕ್ಷೆಯಲ್ಲಿ ಜೆಮ್ಮಾ ಜೋಸೆಫ್ ಅವರು 46 ಲಕ್ಷ ರೂ.ಗಳನ್ನು ಉಷಾಗೆ ಪಾವತಿಸಿದ್ದಾರೆ. ಆದರೆ, ನಿಗದಿತ ಸಮಯದಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸುವುದಾಗಿ ಉಷಾ ನೀಡಿದ್ದ ಭರವಸೆ ಹುಸಿಯಾಗಿದೆ ಎಂದು ಜೋಸೆಫ್ ದೂರಿನಲ್ಲಿ ವಿವರಿಸಿದ್ದಾರೆ. ಇತ್ತೀಚೆಗೆ ಅಸ್ತಿತ್ವಕ್ಕೆ ಬಂದಿರುವ ಬಿಲ್ಡರ್ಗಳ ಮೇಲೆ ನಿಗಾ ಇಡುವ ನಿಯಂತ್ರಕ ಸಂಸ್ಥೆ ಕೇರಳ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರವನ್ನು ದೂರುದಾರರು ಸಂಪರ್ಕಿಸಿದ್ದಾರೆ.
ಭಾರತದ ಮಾಜಿ ಅಥ್ಲೀಟ್ ಪಿ.ಟಿ. ಉಷಾ ಅವರು ಬಿಜೆಪಿ ಸೇರಲು ಮುಂದಾಗಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅನೇಕ ಕ್ಷೇತ್ರಗಳ ಸೆಲೆಬ್ರಿಟಿಗಳು ಬಿಜೆಪಿ ಸೇರಿದ್ದರು. ಆದರೆ, ಪಿ. ಟಿ ಉಷಾ ಸುದ್ದಿಯನ್ನು ಅಲ್ಲಗೆಳೆದಿದ್ದರು.
The Kozhikode Police in Kerala have registered a case against India’s ‘golden girl’ P.T. Usha and six others under Section IPC 420 (cheating and dishonesty) based on a complaint filed by a former athlete, Jemma Joseph.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm