ಬ್ರೇಕಿಂಗ್ ನ್ಯೂಸ್
04-02-22 03:37 pm Source: Vijayakarnataka ಕ್ರೀಡೆ
ಅಹಮದಾಬಾದ್, ಫೆ.4: ದಕ್ಷಿಣ ಆಫ್ರಿಕಾ ವಿರುದ್ಧ ಓಡಿಐ ಸರಣಿ ಸೋಲಿನ ಆಘಾತದಲ್ಲಿರುವ ಟೀಮ್ ಇಂಡಿಯಾ ನೂತನ ನಾಯಕ ರೋಹಿತ್ ಶರ್ಮಾ ನಾಯಕತ್ವದಲ್ಲಿ ಫೆ. 6 ರಂದು ಭಾನುವಾರ ವೆಸ್ಟ್ ಇಂಡೀಸ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲನೇ ಹಣಾಹಣಿಯಲ್ಲಿ ಕಾದಾಟ ನಡೆಸಲು ಸಜ್ಜಾಗುತ್ತಿದೆ.
ಅಂದಹಾಗೆ ಸರಣಿ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾದಲ್ಲಿ ಶಿಖರ್ ಧವನ್, ಶ್ರೇಯಸ್ ಅಯ್ಯರ್, ಋತುರಾಜ್ ಗಾಯಕ್ವಾಡ್ ಹಾಗೂ ಸ್ಟ್ಯಾಂಡ್ ಇನ್ ಬೌಲರ್ ನವದೀಪ್ ಸೈನಿಗೆ ಕೋವಿಡ್-19 ಪಾಸಿಟಿವ್ ಬಂದಿತ್ತು ಈ ಹಿನ್ನೆಲೆಯಲ್ಲಿ ಮೊದಲನೇ ಓಡಿಐ ಪಂದ್ಯದಲ್ಲಿ ಭಾರತ ತಂಡದ ಪ್ಲೇಯಿಂಗ್ ಇಲೆವೆನ್ ಸಂಯೋಜನೆಯಲ್ಲಿ ಹಲವು ಬದಲಾವಣೆಗಳಾಗಲಿವೆ.
ರೋಹಿತ್ ಶರ್ಮಾ ಜೊತೆ ಇನಿಂಗ್ಸ್ ಆರಂಭಿಸಬೇಕಿದ್ದ ಧವನ್ಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಅವರ ಬ್ಯಾಕ್ ಅಪ್ಗೆ ಕನ್ನಡಿಗ ಮಯಾಂಕ್ ಅಗರ್ವಾಲ್ ಅವರನ್ನು ತಂಡಕ್ಕೆ ಕರೆಸಿಕೊಳ್ಳಲಾಗಿದೆ. ಶ್ರೇಯಸ್ ಅಯ್ಯರ್ ಹಾಗೂ ಕೆ.ಎಲ್ ರಾಹುಲ್(ಮೊದಲನೇ ಪಂದ್ಯಕ್ಕೆ ವಿರಾಮ) ಅಲಭ್ಯತೆಯಿಂದ ಮಧ್ಯಮ ಕ್ರಮಾಂಕದಲ್ಲಿಯೂ ಬದಲಾವಣೆಯಾಗುವ ಸಾಧ್ಯತೆ ಇದೆ.
ಅಂದಹಾಗೆ ಭಾನುವಾರ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯುವ ಮೊದಲನೇ ಓಡಿಐ ಪಂದ್ಯಕ್ಕೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂದು ನಾವು ಇಲ್ಲಿ ವಿವರಿಸಿದ್ದೇವೆ.
ಆರಂಭಿಕರು: ರೋಹಿತ್ ಶರ್ಮಾ-ಮಯಾಂಕ್ ಅಗರ್ವಾಲ್
ವೆಸ್ಟ್ ಇಂಡೀಸ್ ವಿರುದ್ಧ ಓಡಿಐ ಪಂದ್ಯಕ್ಕೆ ಮಯಾಂಕ್ ಅಗರ್ವಾಲ್ ಅವರನ್ನು ಆಯ್ಕೆ ಮಾಡಲಾಗಿರಲಿಲ್ಲ. ಆದರೆ ಆರಂಭಿಕ ಬ್ಯಾಟ್ಸ್ಮನ್ಗಳಾದ ಶಿಖರ್ ಧವನ್ ಹಾಗೂ ಋತುರಾಜ್ ಗಾಯಕ್ವಾಡ್ಗೆ ಕೋವಿಡ್-19 ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕನ್ನಡಿಗನನ್ನು ಕರೆಸಿಕೊಳ್ಳಲಾಗಿದೆ. ಮತ್ತೊಂದೆಡೆ ಸ್ನಾಯು ಸೆಳೆತದ ಗಾಯಕ್ಕೆ ತುತ್ತಾಗಿದ್ದರಿಂದ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಅಲಭ್ಯರಾಗಿದ್ದ ರೋಹಿತ್ ಶರ್ಮಾ ಈ ಸರಣಿಯಲ್ಲಿ ಭಾರತ ಸೀಮಿತ ಓವರ್ಗಳ ತಂಡದ ಪೂರ್ಣಪ್ರಮಾಣದ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ನಾಯಕ ರೋಹಿತ್ ಶರ್ಮಾ ಜೊತೆ ಮಯಾಂಕ್ ಇನಿಂಗ್ಸ್ ಆರಂಭಿಸುವುದು ಬಹುತೇಕ ಖಚಿತ.
ಮಧ್ಯಮ ಕ್ರಮಾಂಕ: ಕೊಹ್ಲಿ, ಪಂತ್, ಸೂರ್ಯ, ಹೂಡ
ಇನ್ನು ಎಂದಿನಂತೆ ವಿರಾಟ್ ಕೊಹ್ಲಿ ಮೂರನೇ ಬ್ಯಾಟಿಂಗ್ ಕ್ರಮಾಂಕದಲ್ಲಿ ಆಡಲಿದ್ದಾರೆ. ನೂತನ ನಾಯಕ ರೋಹಿತ್ ಶರ್ಮಾ ಅಡಿಯಲ್ಲಿ ಇದೇ ಮೊದಲ ಬಾರಿ ಕೊಹ್ಲಿ ಕೇವಲ ಬ್ಯಾಟ್ಸ್ಮನ್ ಆಗಿ ಭಾನುವಾರ ಕಣಕ್ಕೆ ಇಳಿಯಲಿದ್ದಾರೆ. ನಾಯಕತ್ವದ ಜವಾಬ್ದಾರಿ ಇಲ್ಲದೆ ಇರುವುದರಿಂದ ಅವರು ಬ್ಯಾಟಿಂಗ್ ಮೇಲೆ ಹೆಚ್ಚಿನ ಗಮನ ಕೇಂದ್ರಿಕರಿಸಬಹುದಾಗಿದೆ. ಮತ್ತೊಂದೆಡೆ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ನಾಲ್ಕನೇ ಬ್ಯಾಟಿಂಗ್ ಕ್ರಮಾಂಕದಲ್ಲಿ ಆಡಬಹುದು. ಇನ್ನು ಸೂರ್ಯಕುಮಾರ್ ಯಾದವ್ ವಿಶೇಷ ಬ್ಯಾಟ್ಸ್ಮನ್ ಆಗಿ 5ನೇ ಕ್ರಮಾಂಕದಲ್ಲಿ ಆಡುವುದು ಬಹುತೇಕ ಖಚಿತ. ಮತ್ತೊಂದೆಡೆ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಲು ಎದುರು ನೋಡುತ್ತಿರುವ ದೀಪಕ್ ಹೂಡ ಭಾನುವಾರ ಮೊದಲ ಪಂದ್ಯದಲ್ಲಿ ಹೆಚ್ಚುವರಿ ಬ್ಯಾಟ್ಸ್ಮನ್ ಹಾಗೂ ಸ್ಪಿನ್ ಆಯ್ಕೆಯೊಂದಿಗೆ 6ನೇ ಕ್ರಮಾಂಕದಲ್ಲಿ ಆಡಬಹುದಾಗಿದೆ.
ಆಲ್ರೌಂಡರ್ಗಳು: ವಾಷಿಂಗ್ಟನ್ ಸುಂದರ್, ದೀಪಕ್ ಚಹರ್
ರವೀಂದ್ರ ಜಡೇಜಾ ಅಲಭ್ಯತೆಯಿಂದಾಗಿ ಗಾಯದಿಂದ ಸಂಪೂರ್ಣ ಚೇತರಿಸಿಕೊಂಡಿರುವ ವಾಷಿಂಗ್ಟನ್ ಸುಂದರ್ ಎಂದಿನಂತೆ ಸ್ಪಿನ್ ಆಲ್ರೌಂಡರ್ ಆಗಿ ಕಣಕ್ಕೆ ಇಳಿಯಲಿದ್ದಾರೆ. ಎಡಗೈ ಸ್ಪಿನ್ ಜೊತೆಗೆ ಬ್ಯಾಟಿಂಗ್ನಲ್ಲಿ ತಂಡಕ್ಕೆ ನೆರವಾಗಬಲ್ಲ ಸಾಮರ್ಥ್ಯವನ್ನು ಹೊಂದಿರುವ ಕಾರಣ ಸುಂದರ್ ಮೊದಲನೇ ಪಂದ್ಯದಲ್ಲಿ ಕಣಕ್ಕೆ ಇಳಿಯುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಆಫ್ರಿಕಾ ವಿರುದ್ಧ ಬೌಲಿಂಗ್ ಹಾಗೂ ಬ್ಯಾಟಿಂಗ್ನಲ್ಲಿ ಗಮನ ಸೆಳೆದಿದ್ದ ದೀಪಕ್ ಚಹರ್ ಮೊದಲನೇ ಪಂದ್ಯದಲ್ಲಿ ಕಣಕ್ಕೆ ಇಳಿಯುವುದು ಬಹುತೇಕ ಖಚಿತ. ಪವರ್ಪ್ಲೇನಲ್ಲಿ ವಿಕೆಟ್ ಪಡೆಯುವ ಸಾಮರ್ಥ್ಯದ ಜೊತೆಗೆ ಬ್ಯಾಕೆಂಡ್ನಲ್ಲಿ ತಂಡಕ್ಕೆ ಅಗತ್ಯ ರನ್ಗಳನ್ನು ಗಳಿಸಬಹುದಾದ ಕೌಶಲವನ್ನು ಚಹರ್ ಹೊಂದಿದ್ದಾರೆ.
ಬೌಲರ್ಗಳು: ಪ್ರಸಿಧ್, ಸಿರಾಜ್, ಚಹಲ್
ಜಸ್ಪ್ರಿತ್ ಬುಮ್ರಾ ಹಾಗೂ ಮೊಹಮ್ಮದ್ ಶಮಿ ವಿರಾಮ ಪಡೆದಿರುವ ಕಾರಣ ಓಡಿಐ ಸರಣಿಯಲ್ಲಿ ಯುವ ಪ್ರತಿಭೆಗಳಿಗೆ ಅವಕಾಶ ಸಿಗುವ ಸಾಧ್ಯತೆ ಇದೆ. ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಓಡಿಐನಲ್ಲಿ ಕಣಕ್ಕೆ ಇಳಿದಿದ್ದ ಪ್ರಸಿಧ್ ಕೃಷ್ಣ ಪ್ಲೇಯಿಂಗ್ ಇಲೆವೆನ್ನಲ್ಲಿ ಅವಕಾಶ ಸಿಗುವ ಸಾಧ್ಯತೆ ಇದೆ. ಹಿರಿಯ ವೇಗಿಗಳ ಅನುಪಸ್ಥಿತಿಯಲ್ಲಿ ವೇಗದ ಬೌಲಿಂಗ್ ವಿಭಾಗವನ್ನು ಮೊಹಮ್ಮದ್ ಸಿರಾಜ್ ಮುನ್ನಡೆಸಲಿದ್ದಾರೆ. ಮತ್ತೊಂದೆಡೆ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಸ್ಪಿನ್ ವಿಭಾಗವನ್ನು ಮುನ್ನಡೆಸಲಿದ್ದು, ಅವರಿಗೆ ವಾಷಿಂಗ್ಟನ್ ಸುಂದರ್ ಸಾಥ್ ನೀಡಲಿದ್ದಾರೆ.
ಪಂದ್ಯ: ಮೊದಲನೇ ಓಡಿಐ
ಮುಖಾಮುಖಿ: ಭಾರತ vs ವೆಸ್ಟ್ ಇಂಡೀಸ್
ದಿನಾಂಕ: ಫೆ. 6, 2022
ಸಮಯ: ಮಧ್ಯಾಹ್ನ 01:30 ಕ್ಕೆ
ಸ್ಥಳ: ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್
Ind Vs Wi 1st Odi, Indias Predicted Playing Xi For 1st Odi Against West Indies, Mayank Agarwal Likely To Open With Rohit Sharma
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm